7:58 PM Friday11 - April 2025
ಬ್ರೇಕಿಂಗ್ ನ್ಯೂಸ್
Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:…

ಇತ್ತೀಚಿನ ಸುದ್ದಿ

‘ಮಾರ್ಕೆಟಿಂಗ್ ಪ್ರಿನ್ಸಿಪಲ್ಸ್ ಅಂಡ್ ಅಪ್ಲಿಕೇಶನ್’ ವಿಷಯದ ಕುರಿತು ಒಂದು ದಿನದ ಅಧ್ಯಯನ ಪ್ರವಾಸ 

11/03/2022, 18:59

ಸುಬ್ರಹ್ಮಣ್ಯ(reporterkarnataka.com):ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗದಿಂದ “ಮಾರ್ಕೆಟಿಂಗ್ ಪ್ರಿನ್ಸಿಪಲ್ಸ್ ಅಂಡ್ ಅಪ್ಲಿಕೇಶನ್ ” ವಿಷಯದ ಕುರಿತಾದ ಒಂದು ದಿನದ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿತ್ತು.

ಅಂತಾರಾಷ್ಟಿಯ ಹಾಳೆ ತಟ್ಟೆ ರಫ್ತ್ತು ಉದ್ಯಮ ವಿಟ್ಲ ಕೊಡಪದವು ಸಮೀಪದ ರಾಜರಾಮ್ ಒಡೆತನದ ಇಕೋ ಬ್ಳಿಸ್ ಉದ್ಯಮಕ್ಕೆ ಭೇಟಿ ನೀಡಿ ಹಾಳೆ  ತಟ್ಟೆ ಉದ್ಯಮ, ಮಾರುಕಟ್ಟೆ ಸಂವರ್ಧನೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾಳೆ  ತಟ್ಟೆ ಬೇಡಿಕೆ,ಪೂರೈಕೆ  ಮತ್ತು ಬೆಲೆಗಳ  ಬಗ್ಗೆ ಮಾಹಿತಿಯನ್ನು ಪಡೆಯಲಾಯಿತು. ಸ್ವದ್ಯೋಗಿಳಿಗೆ  ತಾವೇ ನಿರ್ಮಿಸಿ ವಿನ್ಯಾಸ ಗೊಳಿಸಿದ  ಯಂತ್ರೋಪಕರಣ ಮಾಹಿತಿ ಹಾಗೂ ಸಂಸ್ಥೆಯಲ್ಲಿನ  ಉದ್ಯೋಗಿಗಳಿಗೆ ಕೊಡಮಾಡುವ ಸೌಕರ್ಯ ಗಳ  ಬಗ್ಗೆ ಮಾಹಿತಿ ನೀಡಿದರು. ರಫ್ತ್ತುವಿನ ವಿವಿಧ ಹಂತಗಳ  ಬಗ್ಗೆ ವಿಸ್ತಾರವಾದ  ಮಾಹಿತಿಯನ್ನು ನೀಡಿದರು.ಕಲ್ಲಡ್ಕ ಸಮೀಪದ ಧೀರಜ್  ಹಾಗೂ ಅಜಿತ್ ಒಡೆತನದ ಫಾರ್ಚುನ್ ಪೆಟ್ ಜಾರ್ ಇಂಡಸ್ಟ್ರಿಗೆ ತೆರಳಿ  ವಿವಿಧ  ವಿನ್ಯಾಸದ ಶೀಷೆ ತಯಾರಿಕಾ ಮಾಹಿತಿಯನ್ನು  ಪಡೆಯಲಾಯಿತು. ನಾರಾಯಣ  ಸೋಮಯಾಜಿ ಎರಕಲ ಒಡೆತನದ ಐತಿಹಾಸಿಕ ಬ್ರಹತ್  ಹಂಚು, ಇಟ್ಟಿಗೆ ಮತ್ತು ಟೈಲ್ಸ್ ತಯಾರಿಕ ಘಟಕ ಶ್ರೀಕೃಷ್ಣ ಬ್ರಿಕ್ಸ್ ಅಂಡ್ ಟೈಲ್ಸ್ ಪ್ರೈವೆಟ್. ಲಿ. ಇಲ್ಲಿಗೆ ಭೇಟಿನೀಡಿ  ಸಂಸ್ಥೆಯ  ಇತಿಹಾಸ , ಪ್ರೋಸೆಸ್ಸಿಂಗ್, ಕಾರ್ಖಾನೆಯಲ್ಲಿ ತಯಾರಾಗುವ ವಸ್ತುಗಳು  ಅದರ ಮಾರುಕಟ್ಟೆ ವಿಚಾರದ  ಬಗ್ಗೆ ಮಾಹಿತಿಯನ್ನು ಸಂಸ್ಥೆಯ ವಿದ್ಯಾರ್ಥಿಗಳು ಪಡೆದು  ಕೊಂಡರು

 ಪ್ರಥಮ  ಬಿ. ಕಾಮ್ ಹಾಗೂ ಬಿ. ಬಿ. ಎ ಯ  ಒಟ್ಟು 123 ವಿದ್ಯಾರ್ಥಿ ಅಧ್ಯಯನ ಪ್ರವಾಸದಲ್ಲಿ  ಪಾಲ್ಗೊಂಡಿದ್ದು, ಸಂಸ್ಥೆಯ  ವಾಣಿಜ್ಯ  ಹಾಗೂ ಉದ್ಯಮಾಡಳಿತ ವಿಭಾಗದ ಉಪನ್ಯಾಸಕರಾದ ಶ್ರೀ ರಮಾನಾಥ್. ಎ, ಶಿವಪ್ರಸಾದ್. ಎಸ್ ಮತ್ತು ಕೃತಿಕಾ ಪಿ.ಎಸ್ ಮಾರ್ಗದರ್ಶನ  ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು