9:58 AM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

‘ಮಾರ್ಕೆಟಿಂಗ್ ಪ್ರಿನ್ಸಿಪಲ್ಸ್ ಅಂಡ್ ಅಪ್ಲಿಕೇಶನ್’ ವಿಷಯದ ಕುರಿತು ಒಂದು ದಿನದ ಅಧ್ಯಯನ ಪ್ರವಾಸ 

11/03/2022, 18:59

ಸುಬ್ರಹ್ಮಣ್ಯ(reporterkarnataka.com):ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಾಣಿಜ್ಯ ಮತ್ತು ಉದ್ಯಮಾಡಳಿತ ವಿಭಾಗದಿಂದ “ಮಾರ್ಕೆಟಿಂಗ್ ಪ್ರಿನ್ಸಿಪಲ್ಸ್ ಅಂಡ್ ಅಪ್ಲಿಕೇಶನ್ ” ವಿಷಯದ ಕುರಿತಾದ ಒಂದು ದಿನದ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿತ್ತು.

ಅಂತಾರಾಷ್ಟಿಯ ಹಾಳೆ ತಟ್ಟೆ ರಫ್ತ್ತು ಉದ್ಯಮ ವಿಟ್ಲ ಕೊಡಪದವು ಸಮೀಪದ ರಾಜರಾಮ್ ಒಡೆತನದ ಇಕೋ ಬ್ಳಿಸ್ ಉದ್ಯಮಕ್ಕೆ ಭೇಟಿ ನೀಡಿ ಹಾಳೆ  ತಟ್ಟೆ ಉದ್ಯಮ, ಮಾರುಕಟ್ಟೆ ಸಂವರ್ಧನೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾಳೆ  ತಟ್ಟೆ ಬೇಡಿಕೆ,ಪೂರೈಕೆ  ಮತ್ತು ಬೆಲೆಗಳ  ಬಗ್ಗೆ ಮಾಹಿತಿಯನ್ನು ಪಡೆಯಲಾಯಿತು. ಸ್ವದ್ಯೋಗಿಳಿಗೆ  ತಾವೇ ನಿರ್ಮಿಸಿ ವಿನ್ಯಾಸ ಗೊಳಿಸಿದ  ಯಂತ್ರೋಪಕರಣ ಮಾಹಿತಿ ಹಾಗೂ ಸಂಸ್ಥೆಯಲ್ಲಿನ  ಉದ್ಯೋಗಿಗಳಿಗೆ ಕೊಡಮಾಡುವ ಸೌಕರ್ಯ ಗಳ  ಬಗ್ಗೆ ಮಾಹಿತಿ ನೀಡಿದರು. ರಫ್ತ್ತುವಿನ ವಿವಿಧ ಹಂತಗಳ  ಬಗ್ಗೆ ವಿಸ್ತಾರವಾದ  ಮಾಹಿತಿಯನ್ನು ನೀಡಿದರು.ಕಲ್ಲಡ್ಕ ಸಮೀಪದ ಧೀರಜ್  ಹಾಗೂ ಅಜಿತ್ ಒಡೆತನದ ಫಾರ್ಚುನ್ ಪೆಟ್ ಜಾರ್ ಇಂಡಸ್ಟ್ರಿಗೆ ತೆರಳಿ  ವಿವಿಧ  ವಿನ್ಯಾಸದ ಶೀಷೆ ತಯಾರಿಕಾ ಮಾಹಿತಿಯನ್ನು  ಪಡೆಯಲಾಯಿತು. ನಾರಾಯಣ  ಸೋಮಯಾಜಿ ಎರಕಲ ಒಡೆತನದ ಐತಿಹಾಸಿಕ ಬ್ರಹತ್  ಹಂಚು, ಇಟ್ಟಿಗೆ ಮತ್ತು ಟೈಲ್ಸ್ ತಯಾರಿಕ ಘಟಕ ಶ್ರೀಕೃಷ್ಣ ಬ್ರಿಕ್ಸ್ ಅಂಡ್ ಟೈಲ್ಸ್ ಪ್ರೈವೆಟ್. ಲಿ. ಇಲ್ಲಿಗೆ ಭೇಟಿನೀಡಿ  ಸಂಸ್ಥೆಯ  ಇತಿಹಾಸ , ಪ್ರೋಸೆಸ್ಸಿಂಗ್, ಕಾರ್ಖಾನೆಯಲ್ಲಿ ತಯಾರಾಗುವ ವಸ್ತುಗಳು  ಅದರ ಮಾರುಕಟ್ಟೆ ವಿಚಾರದ  ಬಗ್ಗೆ ಮಾಹಿತಿಯನ್ನು ಸಂಸ್ಥೆಯ ವಿದ್ಯಾರ್ಥಿಗಳು ಪಡೆದು  ಕೊಂಡರು

 ಪ್ರಥಮ  ಬಿ. ಕಾಮ್ ಹಾಗೂ ಬಿ. ಬಿ. ಎ ಯ  ಒಟ್ಟು 123 ವಿದ್ಯಾರ್ಥಿ ಅಧ್ಯಯನ ಪ್ರವಾಸದಲ್ಲಿ  ಪಾಲ್ಗೊಂಡಿದ್ದು, ಸಂಸ್ಥೆಯ  ವಾಣಿಜ್ಯ  ಹಾಗೂ ಉದ್ಯಮಾಡಳಿತ ವಿಭಾಗದ ಉಪನ್ಯಾಸಕರಾದ ಶ್ರೀ ರಮಾನಾಥ್. ಎ, ಶಿವಪ್ರಸಾದ್. ಎಸ್ ಮತ್ತು ಕೃತಿಕಾ ಪಿ.ಎಸ್ ಮಾರ್ಗದರ್ಶನ  ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು