11:42 AM Wednesday4 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಾರನಾಳ ತಾಂಡದಲ್ಲಿ ನೂತನ ತರಕಾರಿ ಮಾರುಕಟ್ಟೆ ಉದ್ಘಾಟನೆ: ಪಿಎಸ್ ಐ ರಾಜಶೇಖರ ರಾಠೋಡ ಚಾಲನೆ

05/01/2025, 10:06

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಮಾರನಾಳ ತಾಂಡ (ಮಾರನಾಳ ತಾಂಡಾ) ರಾಮರಾವ್ ನಗರ ಕ್ರಾಸ್ ಬಳಿ ತರಕಾರಿ ಮಾರುಕಟ್ಟೆ ಉದ್ಘಾಟನೆಯನ್ನು ನಾರಾಯಣಪುರ ಪಿಎಸ್ಐ ರಾಜಶೇಖರ್ ರಾಠೋಡ ನೆರವೇರಿಸಿದರು.

ಸುಸಜ್ಜಿತ ಮತ್ತು ಸುವ್ಯವಸ್ಥಿತ ಮಾರುಕಟ್ಟೆ ಇದಾಗಿದೆ. ಈ ಮಾರುಕಟ್ಟೆಯಿಂದ ದಶಕಗಳಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವರಿಗೆ ಹಾಗೂ ಮಾರಾಟಗಾರರಿಗೆ ಬಹಳ ಅನುಕೂಲವಾಗಲಿದೆ.
ವ್ಯವಸ್ಥಿತವಾಗಿ ಮಾರುಕಟ್ಟೆ ಇಲ್ಲದೆ ರೈತರು ಮತ್ತು ಮಾರಾಟಗಾರರು, ತರಕಾರಿ, ಹಣ್ಣು, ಹೂವುಗಳನ್ನು ಮಾರಾಟ ಮಾಡುತ್ತಿದ್ದಾರೆ. ಹಾಗಾಗಿ ಇದಾನ ನಾವು ಸದುವಯೋಗ ಪಡೆದುಕೊಳ್ಳೋಣಾ ಎಂದು ತಿಳಿಸಿದರು.
*ರಾಮರಾವ್ ನಗರ ಕ್ರಾಸ್ ಬಳಿ ಸಿದ್ದವಾಗುತ್ತಿದೆ ತರಕಾರಿ ಮಾರುಕಟ್ಟೆ;* ನಾರಾಯಣಪುರ ಮತ್ತು ಕೊಡೇಕಲ್ ನಡುವೆ, ನಾರಾಯಣಪುರ ಗ್ರಾಮದಿಂದ ಸುಮಾರು 7 ಕಿ.ಮೀ. ದೂರದಲ್ಲಿದೆ. ಹೊಸ ಮಾರುಕಟ್ಟೆಯು (ಮಾರನಾಳ ತಾಂಡಾ) ರಾಮರಾವ್ ನಗರ ಕ್ರಾಸ್ ಬಳಿ ನಿರ್ಮಿಸಲಾಗಿದೆ. ಇದರಿಂದ ಮಾರನಾಳ, ಯರಕಿಹಾಳ, ಮಾವಿನಗಿಡ್ ತಾಂಡಾ, ಜೋಕಾಂಡಭಾವಿ , ಗಡ್ಡದ ತಾಂಡಾ, ಬರದೇವನಾಳ , ರಾಯನಗೋಳ, ಜುಮಾಲಪುರ್ ದೊಡ್ಡ ತಾಂಡಾ, ಬೆಲ್ಲದಗಿಡ ತಾಂಡಾ, ಹಾಗೂ ಸುತ್ತಮುತ್ತಲಿನ ಗ್ರಾಮ ನಿವಾಸಿಗಳಿಗೆ ಅನುಕೂಲವಾಗಲಿದೆ.
ಮಾರುಕಟ್ಟೆಯಲ್ಲಿನ ಹೈಟೆಕ್ ಸೌಲಭ್ಯಗಳು ಇಲ್ಲದಿದ್ದರೂ ಸಹ ಹವಾಮಾನ ಪರಿಸ್ಥಿತಿಗಳಲ್ಲೂ ಯಾವುದೇ ತೊಂದರೆಯಿಲ್ಲದೆ. ತರಕಾರಿಗಳು, ಹಣ್ಣುಗಳು ಮತ್ತು ಹೂವುಗಳನ್ನು ಮಾರಾಟ ಮಾಡಬಹುದಾಗಿದೆ. ಗ್ರಾಮದ ಮಾರುಕಟ್ಟೆಯ ಸುತ್ತಲಿನ ಸಂಚಾರ ದಟ್ಟಣೆಯಿಂದ ಪ್ರಯಾಣಿಕರು ಮತ್ತು ಪಾದಚಾರಿಗಳು ಕಿರಿಕಿರಿ ಅನುಭವಿಸುತ್ತಾರೆ. ಸದ್ಯ ಮಾರನಾಳ ತಾಂಡದ ರಾಮರಾವ್ ನಗರ ಕ್ರಾಸ್ ಬಳಿ ನಿರ್ಮಿಸಲಾದ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಮಾಡುತ್ತಿರುವ 100ಕ್ಕೂ ಹೆಚ್ಚು ಮಾರಾಟಗಾರರು ಹೊಸ ಮಾರುಕಟ್ಟೆಗೆ ಬಂದಿದರು ಸಂತೋಷ ತರತಕ್ಕದು ಎಂದು ಮಾರಾಟಗಾರರು ಹರ್ಷ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ನಾರಾಯಣಪುರ ಪಿ.ಎಸ್.ಐ. ರಾಜಶೇಖರ್ ರಾಠೋಡ್, ಬರದನಾಳ ಪಿ.ಡಿ.ಓ ಪ್ರೀಮಾ ರಾಠೋಡ್ , ಚಂದು ಹರಾವತ, ಸೀತಾಬಾಯಿ ಪವಾರ, ಶೇಖರ್ ನಾಯಕ್ , ಕೃಷ್ಣ್ ಜಾದವ . ಬಾಬು ಚವಾಣ್,
ಹರಿಕೃಷ್ಣ ಮೂಡ್ , ವಿನೋದ ಪವಾರ , ಜೈರಾಮ್ ರಾಠೋಡ, ತಿರುಪತಿ ಚವಾಣ್ ಹಾಗೂ ಗೋರ್ ಸೇನಾ ಗೋರ್ ಸಿಕವಾಡಿಯ ಹಲವಾರು ಪದಾಧಿಕಾರಿಗಳು. ಮತ್ತು ಗುರು ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು