9:27 PM Thursday20 - November 2025
ಬ್ರೇಕಿಂಗ್ ನ್ಯೂಸ್
ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ

ಇತ್ತೀಚಿನ ಸುದ್ದಿ

ಮಾರನಾಳ ತಾಂಡದಲ್ಲಿ ನೂತನ ತರಕಾರಿ ಮಾರುಕಟ್ಟೆ ಉದ್ಘಾಟನೆ: ಪಿಎಸ್ ಐ ರಾಜಶೇಖರ ರಾಠೋಡ ಚಾಲನೆ

05/01/2025, 10:06

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಮಾರನಾಳ ತಾಂಡ (ಮಾರನಾಳ ತಾಂಡಾ) ರಾಮರಾವ್ ನಗರ ಕ್ರಾಸ್ ಬಳಿ ತರಕಾರಿ ಮಾರುಕಟ್ಟೆ ಉದ್ಘಾಟನೆಯನ್ನು ನಾರಾಯಣಪುರ ಪಿಎಸ್ಐ ರಾಜಶೇಖರ್ ರಾಠೋಡ ನೆರವೇರಿಸಿದರು.

ಸುಸಜ್ಜಿತ ಮತ್ತು ಸುವ್ಯವಸ್ಥಿತ ಮಾರುಕಟ್ಟೆ ಇದಾಗಿದೆ. ಈ ಮಾರುಕಟ್ಟೆಯಿಂದ ದಶಕಗಳಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವರಿಗೆ ಹಾಗೂ ಮಾರಾಟಗಾರರಿಗೆ ಬಹಳ ಅನುಕೂಲವಾಗಲಿದೆ.
ವ್ಯವಸ್ಥಿತವಾಗಿ ಮಾರುಕಟ್ಟೆ ಇಲ್ಲದೆ ರೈತರು ಮತ್ತು ಮಾರಾಟಗಾರರು, ತರಕಾರಿ, ಹಣ್ಣು, ಹೂವುಗಳನ್ನು ಮಾರಾಟ ಮಾಡುತ್ತಿದ್ದಾರೆ. ಹಾಗಾಗಿ ಇದಾನ ನಾವು ಸದುವಯೋಗ ಪಡೆದುಕೊಳ್ಳೋಣಾ ಎಂದು ತಿಳಿಸಿದರು.
*ರಾಮರಾವ್ ನಗರ ಕ್ರಾಸ್ ಬಳಿ ಸಿದ್ದವಾಗುತ್ತಿದೆ ತರಕಾರಿ ಮಾರುಕಟ್ಟೆ;* ನಾರಾಯಣಪುರ ಮತ್ತು ಕೊಡೇಕಲ್ ನಡುವೆ, ನಾರಾಯಣಪುರ ಗ್ರಾಮದಿಂದ ಸುಮಾರು 7 ಕಿ.ಮೀ. ದೂರದಲ್ಲಿದೆ. ಹೊಸ ಮಾರುಕಟ್ಟೆಯು (ಮಾರನಾಳ ತಾಂಡಾ) ರಾಮರಾವ್ ನಗರ ಕ್ರಾಸ್ ಬಳಿ ನಿರ್ಮಿಸಲಾಗಿದೆ. ಇದರಿಂದ ಮಾರನಾಳ, ಯರಕಿಹಾಳ, ಮಾವಿನಗಿಡ್ ತಾಂಡಾ, ಜೋಕಾಂಡಭಾವಿ , ಗಡ್ಡದ ತಾಂಡಾ, ಬರದೇವನಾಳ , ರಾಯನಗೋಳ, ಜುಮಾಲಪುರ್ ದೊಡ್ಡ ತಾಂಡಾ, ಬೆಲ್ಲದಗಿಡ ತಾಂಡಾ, ಹಾಗೂ ಸುತ್ತಮುತ್ತಲಿನ ಗ್ರಾಮ ನಿವಾಸಿಗಳಿಗೆ ಅನುಕೂಲವಾಗಲಿದೆ.
ಮಾರುಕಟ್ಟೆಯಲ್ಲಿನ ಹೈಟೆಕ್ ಸೌಲಭ್ಯಗಳು ಇಲ್ಲದಿದ್ದರೂ ಸಹ ಹವಾಮಾನ ಪರಿಸ್ಥಿತಿಗಳಲ್ಲೂ ಯಾವುದೇ ತೊಂದರೆಯಿಲ್ಲದೆ. ತರಕಾರಿಗಳು, ಹಣ್ಣುಗಳು ಮತ್ತು ಹೂವುಗಳನ್ನು ಮಾರಾಟ ಮಾಡಬಹುದಾಗಿದೆ. ಗ್ರಾಮದ ಮಾರುಕಟ್ಟೆಯ ಸುತ್ತಲಿನ ಸಂಚಾರ ದಟ್ಟಣೆಯಿಂದ ಪ್ರಯಾಣಿಕರು ಮತ್ತು ಪಾದಚಾರಿಗಳು ಕಿರಿಕಿರಿ ಅನುಭವಿಸುತ್ತಾರೆ. ಸದ್ಯ ಮಾರನಾಳ ತಾಂಡದ ರಾಮರಾವ್ ನಗರ ಕ್ರಾಸ್ ಬಳಿ ನಿರ್ಮಿಸಲಾದ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಮಾಡುತ್ತಿರುವ 100ಕ್ಕೂ ಹೆಚ್ಚು ಮಾರಾಟಗಾರರು ಹೊಸ ಮಾರುಕಟ್ಟೆಗೆ ಬಂದಿದರು ಸಂತೋಷ ತರತಕ್ಕದು ಎಂದು ಮಾರಾಟಗಾರರು ಹರ್ಷ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ನಾರಾಯಣಪುರ ಪಿ.ಎಸ್.ಐ. ರಾಜಶೇಖರ್ ರಾಠೋಡ್, ಬರದನಾಳ ಪಿ.ಡಿ.ಓ ಪ್ರೀಮಾ ರಾಠೋಡ್ , ಚಂದು ಹರಾವತ, ಸೀತಾಬಾಯಿ ಪವಾರ, ಶೇಖರ್ ನಾಯಕ್ , ಕೃಷ್ಣ್ ಜಾದವ . ಬಾಬು ಚವಾಣ್,
ಹರಿಕೃಷ್ಣ ಮೂಡ್ , ವಿನೋದ ಪವಾರ , ಜೈರಾಮ್ ರಾಠೋಡ, ತಿರುಪತಿ ಚವಾಣ್ ಹಾಗೂ ಗೋರ್ ಸೇನಾ ಗೋರ್ ಸಿಕವಾಡಿಯ ಹಲವಾರು ಪದಾಧಿಕಾರಿಗಳು. ಮತ್ತು ಗುರು ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು