4:11 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಮಾರನಾಳ ತಾಂಡದಲ್ಲಿ ನೂತನ ತರಕಾರಿ ಮಾರುಕಟ್ಟೆ ಉದ್ಘಾಟನೆ: ಪಿಎಸ್ ಐ ರಾಜಶೇಖರ ರಾಠೋಡ ಚಾಲನೆ

05/01/2025, 10:06

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಮಾರನಾಳ ತಾಂಡ (ಮಾರನಾಳ ತಾಂಡಾ) ರಾಮರಾವ್ ನಗರ ಕ್ರಾಸ್ ಬಳಿ ತರಕಾರಿ ಮಾರುಕಟ್ಟೆ ಉದ್ಘಾಟನೆಯನ್ನು ನಾರಾಯಣಪುರ ಪಿಎಸ್ಐ ರಾಜಶೇಖರ್ ರಾಠೋಡ ನೆರವೇರಿಸಿದರು.

ಸುಸಜ್ಜಿತ ಮತ್ತು ಸುವ್ಯವಸ್ಥಿತ ಮಾರುಕಟ್ಟೆ ಇದಾಗಿದೆ. ಈ ಮಾರುಕಟ್ಟೆಯಿಂದ ದಶಕಗಳಿಂದ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವರಿಗೆ ಹಾಗೂ ಮಾರಾಟಗಾರರಿಗೆ ಬಹಳ ಅನುಕೂಲವಾಗಲಿದೆ.
ವ್ಯವಸ್ಥಿತವಾಗಿ ಮಾರುಕಟ್ಟೆ ಇಲ್ಲದೆ ರೈತರು ಮತ್ತು ಮಾರಾಟಗಾರರು, ತರಕಾರಿ, ಹಣ್ಣು, ಹೂವುಗಳನ್ನು ಮಾರಾಟ ಮಾಡುತ್ತಿದ್ದಾರೆ. ಹಾಗಾಗಿ ಇದಾನ ನಾವು ಸದುವಯೋಗ ಪಡೆದುಕೊಳ್ಳೋಣಾ ಎಂದು ತಿಳಿಸಿದರು.
*ರಾಮರಾವ್ ನಗರ ಕ್ರಾಸ್ ಬಳಿ ಸಿದ್ದವಾಗುತ್ತಿದೆ ತರಕಾರಿ ಮಾರುಕಟ್ಟೆ;* ನಾರಾಯಣಪುರ ಮತ್ತು ಕೊಡೇಕಲ್ ನಡುವೆ, ನಾರಾಯಣಪುರ ಗ್ರಾಮದಿಂದ ಸುಮಾರು 7 ಕಿ.ಮೀ. ದೂರದಲ್ಲಿದೆ. ಹೊಸ ಮಾರುಕಟ್ಟೆಯು (ಮಾರನಾಳ ತಾಂಡಾ) ರಾಮರಾವ್ ನಗರ ಕ್ರಾಸ್ ಬಳಿ ನಿರ್ಮಿಸಲಾಗಿದೆ. ಇದರಿಂದ ಮಾರನಾಳ, ಯರಕಿಹಾಳ, ಮಾವಿನಗಿಡ್ ತಾಂಡಾ, ಜೋಕಾಂಡಭಾವಿ , ಗಡ್ಡದ ತಾಂಡಾ, ಬರದೇವನಾಳ , ರಾಯನಗೋಳ, ಜುಮಾಲಪುರ್ ದೊಡ್ಡ ತಾಂಡಾ, ಬೆಲ್ಲದಗಿಡ ತಾಂಡಾ, ಹಾಗೂ ಸುತ್ತಮುತ್ತಲಿನ ಗ್ರಾಮ ನಿವಾಸಿಗಳಿಗೆ ಅನುಕೂಲವಾಗಲಿದೆ.
ಮಾರುಕಟ್ಟೆಯಲ್ಲಿನ ಹೈಟೆಕ್ ಸೌಲಭ್ಯಗಳು ಇಲ್ಲದಿದ್ದರೂ ಸಹ ಹವಾಮಾನ ಪರಿಸ್ಥಿತಿಗಳಲ್ಲೂ ಯಾವುದೇ ತೊಂದರೆಯಿಲ್ಲದೆ. ತರಕಾರಿಗಳು, ಹಣ್ಣುಗಳು ಮತ್ತು ಹೂವುಗಳನ್ನು ಮಾರಾಟ ಮಾಡಬಹುದಾಗಿದೆ. ಗ್ರಾಮದ ಮಾರುಕಟ್ಟೆಯ ಸುತ್ತಲಿನ ಸಂಚಾರ ದಟ್ಟಣೆಯಿಂದ ಪ್ರಯಾಣಿಕರು ಮತ್ತು ಪಾದಚಾರಿಗಳು ಕಿರಿಕಿರಿ ಅನುಭವಿಸುತ್ತಾರೆ. ಸದ್ಯ ಮಾರನಾಳ ತಾಂಡದ ರಾಮರಾವ್ ನಗರ ಕ್ರಾಸ್ ಬಳಿ ನಿರ್ಮಿಸಲಾದ ಮಾರುಕಟ್ಟೆಯಲ್ಲಿ ತರಕಾರಿ ಮಾರಾಟ ಮಾಡುತ್ತಿರುವ 100ಕ್ಕೂ ಹೆಚ್ಚು ಮಾರಾಟಗಾರರು ಹೊಸ ಮಾರುಕಟ್ಟೆಗೆ ಬಂದಿದರು ಸಂತೋಷ ತರತಕ್ಕದು ಎಂದು ಮಾರಾಟಗಾರರು ಹರ್ಷ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ನಾರಾಯಣಪುರ ಪಿ.ಎಸ್.ಐ. ರಾಜಶೇಖರ್ ರಾಠೋಡ್, ಬರದನಾಳ ಪಿ.ಡಿ.ಓ ಪ್ರೀಮಾ ರಾಠೋಡ್ , ಚಂದು ಹರಾವತ, ಸೀತಾಬಾಯಿ ಪವಾರ, ಶೇಖರ್ ನಾಯಕ್ , ಕೃಷ್ಣ್ ಜಾದವ . ಬಾಬು ಚವಾಣ್,
ಹರಿಕೃಷ್ಣ ಮೂಡ್ , ವಿನೋದ ಪವಾರ , ಜೈರಾಮ್ ರಾಠೋಡ, ತಿರುಪತಿ ಚವಾಣ್ ಹಾಗೂ ಗೋರ್ ಸೇನಾ ಗೋರ್ ಸಿಕವಾಡಿಯ ಹಲವಾರು ಪದಾಧಿಕಾರಿಗಳು. ಮತ್ತು ಗುರು ಹಿರಿಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು