9:32 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮರೋಳಿ ಸೂರ್ಯನಾರಾಯಣ ದೇವಸ್ಥಾನ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ

24/10/2022, 17:30

ಮಂಗಳೂರು(reporterkarnataka.com):ನಗರದ ಮರೋಳಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಬಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಶ್ರೀ ಸೂರ್ಯನಾರಾಯಣ ದೇವಸ್ಥಾನದ ಎಡ ಬದಿಯ ರಸ್ತೆಯ ಅಡ್ಡರಸ್ತೆಗಳ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಕ್ಷೇತ್ರದ ಪರಿಸರದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಸಹಕಾರ ನೀಡುತಿದ್ದು, ಮುಂಬರುವ ದಿನಗಳಲ್ಲಿ ಈ ಭಾಗದ ಜನರ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.

ಮಂಗಳೂರು ಮೇಯರ್ ಜಯಾನಂದ ಅಂಚನ್, ಪಾಲಿಕೆ ಸ್ಥಾಯಿ ಸಮಿತಿಯ ಅಧ್ಯಕ್ಷ ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೋರೇಟರ್ ಕೇಶವ ಮರೋಳಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ‌ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಕಿರಣ್ ಮಾರೋಳಿ, ಕೃಷ್ಣ ಎಸ್ಆರ್, ಜಗದೀಶ್ ಶೆಣೈ, ಜಗನ್ನಾಥ್ ಆಡುಮನೆ, ಪ್ರಶಾಂತ್ ಮರೋಳಿ, ರಾಘು, ಅರುಣ್ ಶೆಟ್ಟಿ,ಸರಳ ಮಾಲತಿ,ರವೀಂದ್ರ , ಜನಾರ್ಧನ. ದೇವಾಡಿಗ, ಬೋಜ ಅಮೀನ್, ಅನಿತಾ, ದೀಪಕ್, ಸುನಿಲ್, ಮೋನಪ್ಪ, ನಳಿನಾಕ್ಷಿ, ದೇಜಪ್ಪ, ದೇವಕಿ, ಸಂಜೀವ, ಶಿವಪ್ಪ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು