7:16 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಮದುವೆ ಮಂಟಪದಂತೆ ಸಿಂಗಾರಗೊಂಡ ಮತದಾನ ಕೇಂದ್ರ; ಬಿಳಿ ಪಂಚೆ -ಶರ್ಟು, ಮೈಸೂರು ಪೇಟ ತೊಟ್ಟ ಅಧಿಕಾರಿಗಳು!!

26/04/2024, 17:56

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ತೆಂಗಿನ ಗರಿಯ ಚಪ್ಪರ ಹಾಕಿ ಮಾವು, ಬಾಳೆ, ತಳಿರು ತೋರಣಗಳಿಂದ ಸಿಂಗಾರಗೊಂಡ ಮತದಾನ ಕೇಂದ್ರ, ಬಿಳಿ ಪಂಚೆ, ಶರ್ಟಿನ ಜೊತೆ ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು. ಹಾಗಾದ್ರೆ ವಿಭಿನ್ನ ಮತ್ತು ವಿಶೇಷ ಕಾರ್ಯವೈಖರಿಗೆ ಕಾರಣ ಏನು ಅಂತೀರಾ ಇಲ್ಲಿದೆ ನೋಡಿ..!


ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಜೆಎಸ್ಎಸ್ ಕಾಲೇಜಿನ ಮತಗಟ್ಟೆಯಲ್ಲಿ ನಡೆಯುತ್ತಿರುವ ಮತದಾನ.
ಬಿಳಿ ಶರ್ಟ್ ಪಂಚೆ, ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಚುನಾವಣಾ ಸಿಬ್ಬಂದಿಗಳು.
ಪ್ರಜಾಪ್ರಭುತ್ವದ ಹಬ್ಬ ಆಚರಣೆಗೆ ಸಾಂಸ್ಕೃತಿಕ ಸೌರಭ ಎಂಬ ಮತಗಟ್ಟೆ ತೆರೆದು ವಿನೂತನವಾಗಿ ಮತದಾರರಿಂದ ಮತದಾನ ಮಾಡಿಸಿಕೊಳ್ಳುತ್ತಿರುವ ಅಧಿಕಾರಿಗಳು.
ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಯುವ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಖಿ, ರೈತ ಮತ್ತು ಯುವ ಮತಗಟ್ಟೆಗಳನ್ನು ತೆರೆಯಲಾಗಿದೆ ಆದರೆ ಇಲ್ಲಿ ತೆಂಗಿನ ಗರಿಯ ಚಪ್ಪರಹಾಕಿ ಮಾವು, ಬಾಳೆ,ತಳಿರು ಕಟ್ಟಿ ಸ್ವಾಗತಿಸಿ ಮತದಾರರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿರುವ ಮತಗಟ್ಟೆಯಾಗಿದೆ.
ಚುನಾವಣಾ ಅಧಿಕಾರಿಗಳ ಈ ಒಂದು ಪ್ರಜಾಪ್ರಭುತ್ವದ ಹಬ್ಬದ ಕಾರ್ಯವೈಕರಿಗೆ ಹ್ಯಾಟ್ಸಾಫ್ ಎನ್ನುತ್ತಾರೆ ಮತದಾರರು.
.

ಇತ್ತೀಚಿನ ಸುದ್ದಿ

ಜಾಹೀರಾತು