7:31 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:…

ಇತ್ತೀಚಿನ ಸುದ್ದಿ

ಮದುವೆ ಮಂಟಪದಂತೆ ಸಿಂಗಾರಗೊಂಡ ಮತದಾನ ಕೇಂದ್ರ; ಬಿಳಿ ಪಂಚೆ -ಶರ್ಟು, ಮೈಸೂರು ಪೇಟ ತೊಟ್ಟ ಅಧಿಕಾರಿಗಳು!!

26/04/2024, 17:56

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ತೆಂಗಿನ ಗರಿಯ ಚಪ್ಪರ ಹಾಕಿ ಮಾವು, ಬಾಳೆ, ತಳಿರು ತೋರಣಗಳಿಂದ ಸಿಂಗಾರಗೊಂಡ ಮತದಾನ ಕೇಂದ್ರ, ಬಿಳಿ ಪಂಚೆ, ಶರ್ಟಿನ ಜೊತೆ ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು. ಹಾಗಾದ್ರೆ ವಿಭಿನ್ನ ಮತ್ತು ವಿಶೇಷ ಕಾರ್ಯವೈಖರಿಗೆ ಕಾರಣ ಏನು ಅಂತೀರಾ ಇಲ್ಲಿದೆ ನೋಡಿ..!


ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಜೆಎಸ್ಎಸ್ ಕಾಲೇಜಿನ ಮತಗಟ್ಟೆಯಲ್ಲಿ ನಡೆಯುತ್ತಿರುವ ಮತದಾನ.
ಬಿಳಿ ಶರ್ಟ್ ಪಂಚೆ, ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಚುನಾವಣಾ ಸಿಬ್ಬಂದಿಗಳು.
ಪ್ರಜಾಪ್ರಭುತ್ವದ ಹಬ್ಬ ಆಚರಣೆಗೆ ಸಾಂಸ್ಕೃತಿಕ ಸೌರಭ ಎಂಬ ಮತಗಟ್ಟೆ ತೆರೆದು ವಿನೂತನವಾಗಿ ಮತದಾರರಿಂದ ಮತದಾನ ಮಾಡಿಸಿಕೊಳ್ಳುತ್ತಿರುವ ಅಧಿಕಾರಿಗಳು.
ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಯುವ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಖಿ, ರೈತ ಮತ್ತು ಯುವ ಮತಗಟ್ಟೆಗಳನ್ನು ತೆರೆಯಲಾಗಿದೆ ಆದರೆ ಇಲ್ಲಿ ತೆಂಗಿನ ಗರಿಯ ಚಪ್ಪರಹಾಕಿ ಮಾವು, ಬಾಳೆ,ತಳಿರು ಕಟ್ಟಿ ಸ್ವಾಗತಿಸಿ ಮತದಾರರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿರುವ ಮತಗಟ್ಟೆಯಾಗಿದೆ.
ಚುನಾವಣಾ ಅಧಿಕಾರಿಗಳ ಈ ಒಂದು ಪ್ರಜಾಪ್ರಭುತ್ವದ ಹಬ್ಬದ ಕಾರ್ಯವೈಕರಿಗೆ ಹ್ಯಾಟ್ಸಾಫ್ ಎನ್ನುತ್ತಾರೆ ಮತದಾರರು.
.

ಇತ್ತೀಚಿನ ಸುದ್ದಿ

ಜಾಹೀರಾತು