9:53 AM Thursday28 - August 2025
ಬ್ರೇಕಿಂಗ್ ನ್ಯೂಸ್
ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:… Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು

ಇತ್ತೀಚಿನ ಸುದ್ದಿ

ಮರು ಜೀವ ಪಡೆದ ‘ಕೆಫೆ ಕಾಫಿ ಡೇ’ ಕಂಪೆನಿ: ಸಾಲ ಮರು ಪಾವತಿಯಲ್ಲಿ ಮಾಳವಿಕಾ ಹೆಗ್ಡೆ ಯಶಸ್ವಿ

14/01/2022, 15:18

ಬೆಂಗಳೂರು(reporterkarnataka.com): ಭಾರೀ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ ಪ್ರತಿಷ್ಠಿತ ಕಂಪೆನಿ ‘ಕೆಫೆ ಕಾಫಿ ಡೇ’ ಇದೀಗ ಮತ್ತೆ ಮರು ಜೀವ ಪಡೆದಿದೆ. ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಇದು ಭಾರಿ ಸುದ್ದಿಯಾಗುತ್ತಿದೆ.

ಕಂಪೆನಿಯ ಸ್ಥಾಪಕ, ಮಾಲಕ ವಿ.ಜಿ.ಸಿದ್ದಾರ್ಥ ಹೆಗ್ಡೆ ಸಾವಿನ ಬಳಿಕ ಇದೀಗ ಸಿದ್ದಾರ್ಥ ಅವರ ಪತ್ನಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಪುತ್ರಿ ಮಾಳವಿಕಾ ಹೆಗ್ಡೆ ಕಂಪೆನಿಯ ದೊಡ್ಡ ಮೊತ್ತದ ಸಾಲವನ್ನು ತೀರಿಸುವಲ್ಲಿ ಯಶಸ್ವಿಯಾಗಿದ್ದು, ಸಂಸ್ಥೆಯನ್ನು ಉಳಿಸಿದ ಮಾಳವಿಕಾ ಹೆಗ್ಡೆ ಅವರು ಇತರರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಹಲವು ಯೂಟ್ಯೂಬ್, ಸುದ್ದಿ ಮಾಧ್ಯಗಳು ವಿಶ್ಲೇಷಿಸಿದೆ.

ಎರಡು ವರ್ಷಗಳಲ್ಲಿ ಕಂಪೆನಿಯ ಸಾಲದ ಮೊತ್ತವನ್ನು 7,200 ಕೋಟಿ ರೂಪಾಯಿಯಿಂದ 1,731 ಕೋಟಿಗೆ ಇಳಿಸುವಲ್ಲಿ ಯಶಸ್ವಿಯಾಗಿರುವ ಮಾಳವಿಕಾ ಹೆಗ್ಡೆ ಕಂಪೆನಿಯ ನೌಕರರಲ್ಲಿಯೂ ಹೊಸ ಭರವಸೆಯನ್ನು ಮೂಡಿಸಿದ್ದಾರೆ.

”ಅವಿರತ ಪ್ರಯತ್ನದಿಂದ ತನ್ನ ವ್ಯಾಪಾರ ಮತ್ತು ಜೀವನವನ್ನು ಮರಳಿ ಪಡೆದ ಶ್ರೀಮತಿ ಮಾಳವಿಕಾ ಹೆಗ್ಡೆಯ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಅವರು ಯಾವಾಗಲೂ ಸಂಕಲ್ಪದ ದಾರಿ ದೀಪವಾಗಿ ನಿಲ್ಲುತ್ತಾರೆ ಮತ್ತು ಜೀವನದಲ್ಲಿ ಭರವಸೆಗಳನ್ನು ಕಳೆದುಕೊಂಡವರಿಗೆ ಅವರೊಂದು ಉತ್ತಮ ಮಾದರಿ. ಕೆಫೆಯ ಸುವರ್ಣ ದಿನಗಳಿಗಾಗಿ ಎದುರುನೋಡುತ್ತಿದ್ದೇವೆ” ಎಂದು ಸಾಮಾಜಿಕ ತಾಣಗಳಲ್ಲಿ ಹಲವರು ಶ್ಲಾಘಿಸಿದ್ದಾರೆ.


ಇನ್ನು ಹಲವಾರು ಆಂಗ್ಲ ಮಾಧ್ಯಮಗಳೂ ಸೇರಿದಂತೆ ಮುಳುಗಿ ಹೋಗುತ್ತಿದ್ದ ಕಂಪನಿಯನ್ನು ಮರುಜೀವಗೊಳಿಸಿದ ಮಾಳವಿಕಾ ಹೆಗ್ಡೆ ಕುರಿತು ವಿಶೇಷ ವರದಿಗಳನ್ನು ಪ್ರಕಟಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು