1:12 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮರವೂರು ಸೇತುವೆ ಹಾನಿಗೆ ಮರಳು ಮಾಫಿಯಾ ಕಾರಣ: ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪ

16/06/2021, 09:47

ಮಂಗಳೂರು(reporterkarnataka news): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮರವೂರು ಸೇತುವೆ ಹಾನಿಗೊಳಗಾಗಲು ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ಮರಳು ಮಾಫಿಯಾವೇ ಪ್ರಮುಖ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ.

ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿ ಇಲ್ಲಿ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ ಎಂದು ಅವರು ಹೇಳಿದರು.
ಪರ್ಯಾಯ ಸೇತುವೆ ನಿರ್ಮಾಣಕ್ಕೆ ಮುಂದಾಗುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ವಹಿಸಬೇಕಿತ್ತು. ಹಿಂದೆಲ್ಲಾ ಜಿಲ್ಲಾಧಿಕಾರಿಗಳು ತಾಲೂಕು ಕೇಂದ್ರಗಳ ಅತಿಥಿ ಗೃಹಗಳಲ್ಲಿ ಶಿಬಿರ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಅರಿತುಕೊಳ್ಳುತ್ತಿದ್ದರು. ಅಂತಹ ವ್ಯವಸ್ಥೆ ಈಗ ಇಲ್ಲ ಎಂದು ಹೇಳಿದ ಅಭಯಚಂದ್ರ ಜೈನ್, ಇದೀಗ ಮರವೂರು ಸೇತುವೆಯ ಜತೆಗೆ ಬಹುಗ್ರಾಮ ಕುಡಿಯುವ ನೀರಿಗಾಗಿ ಹಿಂದಿನ ಶಾಸಕರಾದ ವಿಜಯ ಕುಮಾರ್ ಶೆಟ್ಟಿಯವರ ಮುತುವರ್ಜಿಯಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟಿಗೂ ಅಪಾಯವನ್ನು ತಂದೊಡ್ಡಿದೆ. ಜತೆಗೆ ಕೊಂಕಣ ರೈಲ್ವೆಯ ಸೇತುವೆಯೂ ಇಲ್ಲಿ ಹಾದು ಹೋಗುತ್ತಿದ್ದು, ಅದಕ್ಕೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ರಾಜಕಾರಣಿಗಳ ಕೃಪಕಟಾಕ್ಷದಡಿಯಲ್ಲಿ ನಡೆಯುವ ಮರುಳು ಮಾಫಿಯಾದಿಂದ ಇಂತಹ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಗಣಿಗಾರಿಕೆ ಇಲಾಖೆಯ ಭ್ರಷ್ಟ ಅಧಿಕಾರಿಗಳೂ ಇದಕ್ಕೆ ಕಾರಣ. ನಾನು ಶಾಸಕನಾಗಿದ್ದಾಗ ಇದಕ್ಕೆ ಅವಕಾಶ ನೀಡಿರಲಿಲ್ಲ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು