4:33 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ಬೆಳ್ಳಿತೆರೆಗೆ: ನಾಗರಾಜ್‌ ಸೋಮಯಾಜಿ ನಿರ್ದೇಶನ; ರಾಕೇಶ್ ಅಡಿಗ ನಾಯಕ ನಟ

11/10/2024, 21:44

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮರ್ಯಾದೆ ಪ್ರಶ್ನೆ ತುಂಬಾ ದಿನಗಳಿಂದ ಈ ಸಿನಿಮಾದ ಹೆಸರು ಕೇಳಿ ಬರುತ್ತಲೇ ಇದೆ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್ 22ಕ್ಕೆ ತೆರೆಕಾಣುತ್ತಿದೆ. ಸಕ್ಕತ್ ಸ್ಟುಡಿಯೋದ ಸಂಸ್ಥಾಪಕ ಆರ್.ಜೆ ಪ್ರದೀಪ್ ಈ ಸಿನಿಮಾವನ್ನು
ನಿರ್ಮಿಸಿದ್ದು, ನಾಗರಾಜ್‌ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ.
ತೀರ್ಥಹಳ್ಳಿಯ ಯುವ ನಟ ರಾಕೇಶ್ ಅಡಿಗ ಅವರು ನಾಯಕ ನಟನಾಗಿ ನಟಿಸಿದ್ದಾರೆ.
ಸಿನಿಮಾದ ಬಿಡುಗಡೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿಗೆ ಆಗಮಿಸಿದ್ದ ನಾಯಕ ನಟ ಹಾಗೂ ನಿರ್ಮಾಪಕರು
ತಮ್ಮ ಕನಸಿನ ಬಗ್ಗೆ ಮಾತನಾಡಿದರು.ನಿರ್ಮಾಪಕ ಆರ್.ಜೆ.ಪ್ರದೀಪ್ ಮಾತನಾಡಿ, ಸಕ್ಕತ್ ಸ್ಟುಡಿಯೋ ನಮ್ಮ ಕನಸು. ಒಂದೊಳ್ಳೆ ಚಿತ್ರ ಮಾಡಬೇಕು ಅನ್ನೋದು ಇತ್ತು. ನಾನು
ನಾಗರಾಜ್ ಕಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಬ್ಬರು ಸೇರಿ ಸಿನಿಮಾಗಾಗಿ ಕೈ ಜೋಡಿಸಿದೆವು ಎಂದರು.
ಒಂದೊಳ್ಳೆ ಸಿನಿಮಾ ಮಾಡಿಕೊಂಡು ಜನರಿಗೆ ತಲುಪಿಸಲು ಡೇಟ್ ಫಿಕ್ಸ್‌ ಮಾಡಿಕೊಂಡು ನಿಮ್ಮ ಮುಂದೆ ಬಂದಿದ್ದೇವೆ. ಈಗಾಗಲೇ ಚಿತ್ರ ಬಿಡುಗಡೆಗೆ 45 ದಿನ ಇದ್ದು ಅಷ್ಟರೊಳಗೆ ಚಿತ್ರದ ಹಾಡುಗಳು ಬಿಡುಗಡೆ ಆಗಲಿದೆ. ಒಂದು ಹಾಡಿಗೆ ನಟ ಶರಣ್ ಹಾಡಿದ್ದಾರೆ ಎಂದರು.

‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ರಾಕೇಶ್ ಅಡಿಗ,
ಸುನೀಲ್ ರಾವ್, ಶೈನ್ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡೂರು, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್ ಮುಖ್ಯ ತಾರಾಗಣದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು