3:00 AM Wednesday2 - April 2025
ಬ್ರೇಕಿಂಗ್ ನ್ಯೂಸ್
EX CM | ವಕ್ಸ್ ಆಸ್ತಿ ಕಬಳಿಸಿರುವುದನ್ನು ಮುಚ್ಚಿ ಹಾಕಲು ಕಾಂಗ್ರೆಸ್‌ ತಿದ್ದುಪಡಿ… Chikkamagaluru | ಅನ್ನದಾತ ಆತ್ಮಹತ್ಯೆ: ಕಿರುಕುಳ ನೀಡಿದ ಬ್ಯಾಂಕ್ ಎದುರು ರೈತನ ಪಾರ್ಥಿವ… Mangaluru | ಜಾಮರ್ ಸಮಸ್ಯೆ ಬಗೆಹರಿಸದಿದ್ದರೆ ಜೈಲಿನೊಳಗೆ ನುಗ್ಗಿ ಕಿತ್ತು ಬಿಸಾಕ ಬೇಕಾಗುತ್ತದೆ:… Delhi | ರಾಜ್ಯದ್ದು “ಜನ-ಕರ” ವಸೂಲಿ ಸರಕಾರ: ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ… Chikkamagaluru | ಕೆಮ್ಮಣ್ಣುಗುಂಡಿ ಸಮೀಪ ವಿದ್ಯುತ್ ಶಾಕ್ ನಿಂದ ಕಾಡಾನೆ ದಾರುಣ ಸಾವು ಕೂಡ್ಲಿಗಿ: ರಂಜಾನ್ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಭಾಗಿ ಭಾಗಿ Kolara | ಶ್ರೀನಿವಾಸಪುರದಲ್ಲಿ ಸಂಭ್ರಮ- ಸಡಗರದಲ್ಲಿ ಈದ್-ಉಲ್-ಫಿತರ್ ಆಚರಣೆ: ಸಾಮೂಹಿಕ ಪ್ರಾರ್ಥನೆ PDO | ಮಾದರಿ ಗ್ರಾಮ ಪಂಚಾಯತಿ ನಿರ್ಮಾಣದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ… Bangalore | ಸಬಲೀಕರಣ ಜತೆಗೆ ಮಹಿಳಾ ಸುರಕ್ಷತೆ: ‘ಬಿ.ಸೇಫ್’ ಸಮೀಕ್ಷಾ ವರದಿ ಬಿಡುಗಡೆ Bangalore | ಬೇಡಿಕೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಬ್ಯಾಂಕ್ ನಿವೃತ್ತರ ಒಕ್ಕೂಟಗಳ…

ಇತ್ತೀಚಿನ ಸುದ್ದಿ

‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ಬೆಳ್ಳಿತೆರೆಗೆ: ನಾಗರಾಜ್‌ ಸೋಮಯಾಜಿ ನಿರ್ದೇಶನ; ರಾಕೇಶ್ ಅಡಿಗ ನಾಯಕ ನಟ

11/10/2024, 21:44

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮರ್ಯಾದೆ ಪ್ರಶ್ನೆ ತುಂಬಾ ದಿನಗಳಿಂದ ಈ ಸಿನಿಮಾದ ಹೆಸರು ಕೇಳಿ ಬರುತ್ತಲೇ ಇದೆ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್ 22ಕ್ಕೆ ತೆರೆಕಾಣುತ್ತಿದೆ. ಸಕ್ಕತ್ ಸ್ಟುಡಿಯೋದ ಸಂಸ್ಥಾಪಕ ಆರ್.ಜೆ ಪ್ರದೀಪ್ ಈ ಸಿನಿಮಾವನ್ನು
ನಿರ್ಮಿಸಿದ್ದು, ನಾಗರಾಜ್‌ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ.
ತೀರ್ಥಹಳ್ಳಿಯ ಯುವ ನಟ ರಾಕೇಶ್ ಅಡಿಗ ಅವರು ನಾಯಕ ನಟನಾಗಿ ನಟಿಸಿದ್ದಾರೆ.
ಸಿನಿಮಾದ ಬಿಡುಗಡೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿಗೆ ಆಗಮಿಸಿದ್ದ ನಾಯಕ ನಟ ಹಾಗೂ ನಿರ್ಮಾಪಕರು
ತಮ್ಮ ಕನಸಿನ ಬಗ್ಗೆ ಮಾತನಾಡಿದರು.ನಿರ್ಮಾಪಕ ಆರ್.ಜೆ.ಪ್ರದೀಪ್ ಮಾತನಾಡಿ, ಸಕ್ಕತ್ ಸ್ಟುಡಿಯೋ ನಮ್ಮ ಕನಸು. ಒಂದೊಳ್ಳೆ ಚಿತ್ರ ಮಾಡಬೇಕು ಅನ್ನೋದು ಇತ್ತು. ನಾನು
ನಾಗರಾಜ್ ಕಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಬ್ಬರು ಸೇರಿ ಸಿನಿಮಾಗಾಗಿ ಕೈ ಜೋಡಿಸಿದೆವು ಎಂದರು.
ಒಂದೊಳ್ಳೆ ಸಿನಿಮಾ ಮಾಡಿಕೊಂಡು ಜನರಿಗೆ ತಲುಪಿಸಲು ಡೇಟ್ ಫಿಕ್ಸ್‌ ಮಾಡಿಕೊಂಡು ನಿಮ್ಮ ಮುಂದೆ ಬಂದಿದ್ದೇವೆ. ಈಗಾಗಲೇ ಚಿತ್ರ ಬಿಡುಗಡೆಗೆ 45 ದಿನ ಇದ್ದು ಅಷ್ಟರೊಳಗೆ ಚಿತ್ರದ ಹಾಡುಗಳು ಬಿಡುಗಡೆ ಆಗಲಿದೆ. ಒಂದು ಹಾಡಿಗೆ ನಟ ಶರಣ್ ಹಾಡಿದ್ದಾರೆ ಎಂದರು.

‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ರಾಕೇಶ್ ಅಡಿಗ,
ಸುನೀಲ್ ರಾವ್, ಶೈನ್ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡೂರು, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್ ಮುಖ್ಯ ತಾರಾಗಣದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು