8:55 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ಬೆಳ್ಳಿತೆರೆಗೆ: ನಾಗರಾಜ್‌ ಸೋಮಯಾಜಿ ನಿರ್ದೇಶನ; ರಾಕೇಶ್ ಅಡಿಗ ನಾಯಕ ನಟ

11/10/2024, 21:44

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮರ್ಯಾದೆ ಪ್ರಶ್ನೆ ತುಂಬಾ ದಿನಗಳಿಂದ ಈ ಸಿನಿಮಾದ ಹೆಸರು ಕೇಳಿ ಬರುತ್ತಲೇ ಇದೆ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್ 22ಕ್ಕೆ ತೆರೆಕಾಣುತ್ತಿದೆ. ಸಕ್ಕತ್ ಸ್ಟುಡಿಯೋದ ಸಂಸ್ಥಾಪಕ ಆರ್.ಜೆ ಪ್ರದೀಪ್ ಈ ಸಿನಿಮಾವನ್ನು
ನಿರ್ಮಿಸಿದ್ದು, ನಾಗರಾಜ್‌ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ.
ತೀರ್ಥಹಳ್ಳಿಯ ಯುವ ನಟ ರಾಕೇಶ್ ಅಡಿಗ ಅವರು ನಾಯಕ ನಟನಾಗಿ ನಟಿಸಿದ್ದಾರೆ.
ಸಿನಿಮಾದ ಬಿಡುಗಡೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿಗೆ ಆಗಮಿಸಿದ್ದ ನಾಯಕ ನಟ ಹಾಗೂ ನಿರ್ಮಾಪಕರು
ತಮ್ಮ ಕನಸಿನ ಬಗ್ಗೆ ಮಾತನಾಡಿದರು.ನಿರ್ಮಾಪಕ ಆರ್.ಜೆ.ಪ್ರದೀಪ್ ಮಾತನಾಡಿ, ಸಕ್ಕತ್ ಸ್ಟುಡಿಯೋ ನಮ್ಮ ಕನಸು. ಒಂದೊಳ್ಳೆ ಚಿತ್ರ ಮಾಡಬೇಕು ಅನ್ನೋದು ಇತ್ತು. ನಾನು
ನಾಗರಾಜ್ ಕಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಬ್ಬರು ಸೇರಿ ಸಿನಿಮಾಗಾಗಿ ಕೈ ಜೋಡಿಸಿದೆವು ಎಂದರು.
ಒಂದೊಳ್ಳೆ ಸಿನಿಮಾ ಮಾಡಿಕೊಂಡು ಜನರಿಗೆ ತಲುಪಿಸಲು ಡೇಟ್ ಫಿಕ್ಸ್‌ ಮಾಡಿಕೊಂಡು ನಿಮ್ಮ ಮುಂದೆ ಬಂದಿದ್ದೇವೆ. ಈಗಾಗಲೇ ಚಿತ್ರ ಬಿಡುಗಡೆಗೆ 45 ದಿನ ಇದ್ದು ಅಷ್ಟರೊಳಗೆ ಚಿತ್ರದ ಹಾಡುಗಳು ಬಿಡುಗಡೆ ಆಗಲಿದೆ. ಒಂದು ಹಾಡಿಗೆ ನಟ ಶರಣ್ ಹಾಡಿದ್ದಾರೆ ಎಂದರು.

‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ರಾಕೇಶ್ ಅಡಿಗ,
ಸುನೀಲ್ ರಾವ್, ಶೈನ್ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡೂರು, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್ ಮುಖ್ಯ ತಾರಾಗಣದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು