5:53 AM Wednesday9 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ಬೆಳ್ಳಿತೆರೆಗೆ: ನಾಗರಾಜ್‌ ಸೋಮಯಾಜಿ ನಿರ್ದೇಶನ; ರಾಕೇಶ್ ಅಡಿಗ ನಾಯಕ ನಟ

11/10/2024, 21:44

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮರ್ಯಾದೆ ಪ್ರಶ್ನೆ ತುಂಬಾ ದಿನಗಳಿಂದ ಈ ಸಿನಿಮಾದ ಹೆಸರು ಕೇಳಿ ಬರುತ್ತಲೇ ಇದೆ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್ 22ಕ್ಕೆ ತೆರೆಕಾಣುತ್ತಿದೆ. ಸಕ್ಕತ್ ಸ್ಟುಡಿಯೋದ ಸಂಸ್ಥಾಪಕ ಆರ್.ಜೆ ಪ್ರದೀಪ್ ಈ ಸಿನಿಮಾವನ್ನು
ನಿರ್ಮಿಸಿದ್ದು, ನಾಗರಾಜ್‌ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ.
ತೀರ್ಥಹಳ್ಳಿಯ ಯುವ ನಟ ರಾಕೇಶ್ ಅಡಿಗ ಅವರು ನಾಯಕ ನಟನಾಗಿ ನಟಿಸಿದ್ದಾರೆ.
ಸಿನಿಮಾದ ಬಿಡುಗಡೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿಗೆ ಆಗಮಿಸಿದ್ದ ನಾಯಕ ನಟ ಹಾಗೂ ನಿರ್ಮಾಪಕರು
ತಮ್ಮ ಕನಸಿನ ಬಗ್ಗೆ ಮಾತನಾಡಿದರು.ನಿರ್ಮಾಪಕ ಆರ್.ಜೆ.ಪ್ರದೀಪ್ ಮಾತನಾಡಿ, ಸಕ್ಕತ್ ಸ್ಟುಡಿಯೋ ನಮ್ಮ ಕನಸು. ಒಂದೊಳ್ಳೆ ಚಿತ್ರ ಮಾಡಬೇಕು ಅನ್ನೋದು ಇತ್ತು. ನಾನು
ನಾಗರಾಜ್ ಕಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಬ್ಬರು ಸೇರಿ ಸಿನಿಮಾಗಾಗಿ ಕೈ ಜೋಡಿಸಿದೆವು ಎಂದರು.
ಒಂದೊಳ್ಳೆ ಸಿನಿಮಾ ಮಾಡಿಕೊಂಡು ಜನರಿಗೆ ತಲುಪಿಸಲು ಡೇಟ್ ಫಿಕ್ಸ್‌ ಮಾಡಿಕೊಂಡು ನಿಮ್ಮ ಮುಂದೆ ಬಂದಿದ್ದೇವೆ. ಈಗಾಗಲೇ ಚಿತ್ರ ಬಿಡುಗಡೆಗೆ 45 ದಿನ ಇದ್ದು ಅಷ್ಟರೊಳಗೆ ಚಿತ್ರದ ಹಾಡುಗಳು ಬಿಡುಗಡೆ ಆಗಲಿದೆ. ಒಂದು ಹಾಡಿಗೆ ನಟ ಶರಣ್ ಹಾಡಿದ್ದಾರೆ ಎಂದರು.

‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ರಾಕೇಶ್ ಅಡಿಗ,
ಸುನೀಲ್ ರಾವ್, ಶೈನ್ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡೂರು, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್ ಮುಖ್ಯ ತಾರಾಗಣದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು