8:44 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

‘ಮರ್ಯಾದೆ ಪ್ರಶ್ನೆ’ ನವೆಂಬರ್ 22ಕ್ಕೆ ಬೆಳ್ಳಿತೆರೆಗೆ: ನಾಗರಾಜ್‌ ಸೋಮಯಾಜಿ ನಿರ್ದೇಶನ; ರಾಕೇಶ್ ಅಡಿಗ ನಾಯಕ ನಟ

11/10/2024, 21:44

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಮರ್ಯಾದೆ ಪ್ರಶ್ನೆ ತುಂಬಾ ದಿನಗಳಿಂದ ಈ ಸಿನಿಮಾದ ಹೆಸರು ಕೇಳಿ ಬರುತ್ತಲೇ ಇದೆ. ಈಗ ಈ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ನವೆಂಬರ್ 22ಕ್ಕೆ ತೆರೆಕಾಣುತ್ತಿದೆ. ಸಕ್ಕತ್ ಸ್ಟುಡಿಯೋದ ಸಂಸ್ಥಾಪಕ ಆರ್.ಜೆ ಪ್ರದೀಪ್ ಈ ಸಿನಿಮಾವನ್ನು
ನಿರ್ಮಿಸಿದ್ದು, ನಾಗರಾಜ್‌ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ.
ತೀರ್ಥಹಳ್ಳಿಯ ಯುವ ನಟ ರಾಕೇಶ್ ಅಡಿಗ ಅವರು ನಾಯಕ ನಟನಾಗಿ ನಟಿಸಿದ್ದಾರೆ.
ಸಿನಿಮಾದ ಬಿಡುಗಡೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿಗೆ ಆಗಮಿಸಿದ್ದ ನಾಯಕ ನಟ ಹಾಗೂ ನಿರ್ಮಾಪಕರು
ತಮ್ಮ ಕನಸಿನ ಬಗ್ಗೆ ಮಾತನಾಡಿದರು.ನಿರ್ಮಾಪಕ ಆರ್.ಜೆ.ಪ್ರದೀಪ್ ಮಾತನಾಡಿ, ಸಕ್ಕತ್ ಸ್ಟುಡಿಯೋ ನಮ್ಮ ಕನಸು. ಒಂದೊಳ್ಳೆ ಚಿತ್ರ ಮಾಡಬೇಕು ಅನ್ನೋದು ಇತ್ತು. ನಾನು
ನಾಗರಾಜ್ ಕಥೆ ಬಗ್ಗೆ ಚರ್ಚೆ ಮಾಡಿದ್ದೇವೆ. ಇಬ್ಬರು ಸೇರಿ ಸಿನಿಮಾಗಾಗಿ ಕೈ ಜೋಡಿಸಿದೆವು ಎಂದರು.
ಒಂದೊಳ್ಳೆ ಸಿನಿಮಾ ಮಾಡಿಕೊಂಡು ಜನರಿಗೆ ತಲುಪಿಸಲು ಡೇಟ್ ಫಿಕ್ಸ್‌ ಮಾಡಿಕೊಂಡು ನಿಮ್ಮ ಮುಂದೆ ಬಂದಿದ್ದೇವೆ. ಈಗಾಗಲೇ ಚಿತ್ರ ಬಿಡುಗಡೆಗೆ 45 ದಿನ ಇದ್ದು ಅಷ್ಟರೊಳಗೆ ಚಿತ್ರದ ಹಾಡುಗಳು ಬಿಡುಗಡೆ ಆಗಲಿದೆ. ಒಂದು ಹಾಡಿಗೆ ನಟ ಶರಣ್ ಹಾಡಿದ್ದಾರೆ ಎಂದರು.

‘ಮರ್ಯಾದೆ ಪ್ರಶ್ನೆ’ ಸಿನಿಮಾದಲ್ಲಿ ರಾಕೇಶ್ ಅಡಿಗ,
ಸುನೀಲ್ ರಾವ್, ಶೈನ್ ಶೆಟ್ಟಿ, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ಪ್ರಭು ಮುಂಡೂರು, ರೇಖಾ ಕೂಡ್ಲಿಗಿ, ನಾಗೇಂದ್ರ ಶಾ, ಶ್ರವಣ್ ಮುಖ್ಯ ತಾರಾಗಣದಲ್ಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು