3:20 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಮಸ್ಕತ್ ವಾಹನ ಅಪಘಾತ: 25 ಲಕ್ಷ ಪರಿಹಾರ ಮಂಜೂರು; ಒಮಾನ್ ಸೋಶಿಯಲ್ ಫೋರಂ ಕಾನೂನು ಹೋರಾಟಕ್ಕೆ ಸಂದ ಜಯ

07/08/2021, 10:40

ಮಸ್ಕತ್ : ಒಮಾನ್ ನ ಮಬೇಲ ಎಂಬಲ್ಲಿ ಎರಡು ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ ಮೃತಪಟ್ಟ ನೂರ್ ಮುಹಮ್ಮದ್ ಕುಟುಂಬಕ್ಕೆ ಪರಿಹಾರ ಮೊತ್ತ ದೊರಕಿಸಿ ಕೊಡುವಲ್ಲಿ ಸೋಶಿಯಲ್ ಫೋರಮ್ ಒಮಾನ್ ಯಶಸ್ವಿಯಾಗಿದೆ.

2019ರ ಮೇ 11ರಂದು ವಾಹನ ಅಪಘಾತ ನಡೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುನ್ನತ್ ಕೆರೆ ನಿವಾಸಿ ನೂರ್ ಮುಹಮ್ಮದ್ (25) ಮತ್ತು ಚಾಲಕ ಒಮಾನ್ ಪ್ರಜೆ ಸ್ಥಳದಲ್ಲೇ ಮೃತಪಟ್ಟಿದ್ದರು. ನೂರ್ ಮುಹಮ್ಮದ್ ರ ಮೃತದೇಹವನ್ನು ಕೇವಲ ಎರಡು ದಿನಗಳಲ್ಲಿ ಸೋಶಿಯಲ್ ಫೋರಮ್ ಒಮಾನ್ ನೆರವಿನಿಂದ ಊರಿಗೆ ಕಳುಹಿಸಿಕೊಡಲಾಗಿತ್ತು.

ತೀರಾ ಬಡ ಕುಟುಂಬದ ಯುವಕ ನೂರ್ ಮುಹಮ್ಮದ್ ಅಪಾರ ಕನಸಿನೊಂದಿಗೆ ಮೊತ್ತಮೊದಲ ಬಾರಿಗೆ ಒಮಾನ್ ಗೆ ಬಂದಿದ್ದು ಮುಸನ್ನ ಎಂಬಲ್ಲಿನ ‘ಮಸ್ಕತ್ ವಾಟರ್’ ಬಾಟಲಿ ನೀರು ಕಂಪೆನಿಯಲ್ಲಿ ಸೇಲ್ಸ್ ಮನ್ ಆಗಿ ಉದ್ಯೋಗ ಸೇರಿಕೊಂಡಿದ್ದರು. 2019ರ ಮೇ 11ರಂದು ಕಂಪೆನಿಯ ವಾಹನವು ಭೀಕರ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಚಾಲಕ ಮತ್ತು ನೂರ್ ಮುಹಮ್ಮದ್ ಮೃತಪಟ್ಟಿದ್ದರು. ಈ ಬಗ್ಗೆ ಕಾರ್ಯಪ್ರವೃತ್ತರಾದ ಸೋಶಿಯಲ್ ಫೋರಮ್ ಒಮಾನ್ ತಂಡವು ಅಪಘಾತದ ಪರಿಹಾರ ಮೊತ್ತಕ್ಕಾಗಿ ಸ್ಥಳೀಯ ನ್ಯಾಯಾಲಯದಲ್ಲಿ ದಾವೆ ಹೂಡಿತ್ತು. ನಿರಂತರ 2 ವರ್ಷಗಳ ಕಾನೂನು ಹೋರಾಟದ ಫಲವಾಗಿ  25 ಲಕ್ಷ ರೂಪಾಯಿ ಪರಿಹಾರ ಮೊತ್ತವು ಬಿಡುಗಡೆಯಾಗಿರುತ್ತದೆ. ಮೃತ ನೂರ್ ಮುಹಮ್ಮದ್ ರ ತಾಯಿ ಕೂಡ ಎರಡು ತಿಂಗಳ ಹಿಂದೆ ಮೃತಪಟ್ಟಿದ್ದರು. ಇದೀಗ ನೂರ್ ಮುಹಮ್ಮದ್ ರ ಕುಟುಂಬದಲ್ಲಿ ತಂದೆ, ಅಣ್ಣ, ಅಕ್ಕ ಇದ್ದಾರೆ. ಬಿಡುಗಡೆಗೊಂಡ ಪರಿಹಾರ ಮೊತ್ತವನ್ನು ಸೋಶಿಯಲ್ ಫೋರಮ್ ಒಮಾನ್ ಮೂಲಕ ಸಂತ್ರಸ್ತ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಕಾನೂನು  ಹೋರಾಟದಲ್ಲಿ ಮುಹಿಯುದ್ದೀನ್ ಗುರುವಾಯನಕೆರೆ, ಅಬ್ದುಲ್ ಹಮೀದ್ ಪಾಣೆಮಂಗಳೂರು, ಇರ್ಫಾನ್ ಉಜಿರೆ, ಆಸಿಫ್ ಬೈಲೂರು,  ಊರಿನ ಸ್ಥಳೀಯ ಗ್ರಾ.ಪಂ.ಸದಸ್ಯ ಮುಸ್ತಫಾ ಜಿ. ಕೆ.,  ರಿಹಾನ್ ಸಾಹೇಬ್ ಮುಂತಾದವರು ಸಹಕರಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು