9:19 PM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಮಸ್ಕಿ: ಮುಸ್ಲಿಂಮರೇ ಇರದ ಊರಲ್ಲಿ ಭಾವೈಕ್ಯತೆಯ ಮೊಹರಂ ಆಚರಣೆ

20/08/2021, 21:24

ವಿರುಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಗ್ರಾಮೀಣ ಭಾಗದ ಮುಸ್ಲಿಂ ಇರದ ಊರಾದ ರಾಯಚೂರಿನ ಮಸ್ಕಿ ಸಮೀಪದ ಅಂತರಗಂಗೆ ಗ್ರಾಮದಲ್ಲಿ ಯಾವುದೇ ತಕರಾರು ಇಲ್ಲದೆ ಸರಳ ರೀತಿಯ ಮೊಹರಂ ಆಚರಣೆ ಮಾಡಲಾಯಿತು. 

ಪ್ರತಿ ವರ್ಷದಂತೆ ಈ ವರ್ಷ ಅದ್ದೂರಿಯಾಗಿ ಹಬ್ಬವು ಆಚರಣೆ ನಡೆಯಲಿಲ್ಲ. ಸರಕಾರ ಆದೇಶದಂತೆ ಸಂಜೆ 4 ಗಂಟೆಗೆ ದೇವರು ಕಳಿಸುವ ಕಾರ್ಯಕ್ರಮ ಪ್ರಾರಂಭಿಸಲಾಯಿತು. 

ಪ್ರತಿವರ್ಷದಂತೆ ಈ ವರ್ಷವೂ ಕೂಡ ಭಕ್ತ ತಮ್ಮ ಹರಕೆಗಳ ತೀರಿಸುತ್ತಾ, ಕೋವಿಡ್ ಇರುವುದರಿಂದ ಶಾಂತಿಯುತವಾಗಿ ಕಾರ್ಯಕ್ರಮ ನೆರವೇರಿಸಿದರು.

ದೇವರು ಕಂಬಾರ ಮನೆಗೆ ಹೋಗಿ ದರ್ಶನ ಮಾಡಿ ಬರೋದು ಮತ್ತು ಭಕ್ತರು ತಮ್ಮ ಹರಕೆಗಳನ್ನು ತೀರಿಸುವುದು ಇಲ್ಲಿನ ವಾಡಿಕೆ. ಮತ್ತೆ ದೇವರು ಹೋಳಿಗೆ ಹೋಗುವಾಗ ಬೆಂಕಿಯಲ್ಲಿ ದೇವರು ನಡೆದಾಡುವ ದೃಶ್ಯ ಆಕರ್ಷಣೀಯವಾದದ್ದು.

ಏನೇ ಆದರೂ ಈ ಬಾರಿ ಕೊರೊನಾ ಕರಿನೆರಳು ಹರಿದಂತೆ ಆಯ್ತು. ದೇವರ ಮನದಲ್ಲಿ ನೆನೆದು ತಮ್ಮ ಹರಕೆಗಳನ್ನು ತೀರಿಸುವ ಕಾರ್ಯಕ್ರಮ ನೆರವೇರಿತು. ಮಸ್ಕಿ ಪಟ್ಟಣ ಸೇರಿದಂತೆ ವಿವಿಧ ಮಸೀದಿಗಳಲ್ಲಿ ಸರಳಾಗಿ

ಮೋಹರಂ ಹಬ್ಬ ಆಚರಣೆ ಮಾಡಲಾಯಿತು. ಸಂತೆ ಕೆಲ್ಲೂರು ಗ್ರಾಮದಲ್ಲಿ ಬೆಳಗ್ಗೆ 5 ಗಂಟೆಗೆ ದೇವರು ಅಲ್ಲಲ್ಲಿ ಬಿಲಾಲ್ ತೆಗೆದುಕೊಳ್ಳುವಾಗ ವಿದ್ಯುತ್ ಸ್ಪರ್ಶದಿಂದ  ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು