1:55 PM Saturday5 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ಮಸ್ಕಿ: ಮುಸ್ಲಿಂಮರೇ ಇರದ ಊರಲ್ಲಿ ಭಾವೈಕ್ಯತೆಯ ಮೊಹರಂ ಆಚರಣೆ

20/08/2021, 21:24

ವಿರುಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಗ್ರಾಮೀಣ ಭಾಗದ ಮುಸ್ಲಿಂ ಇರದ ಊರಾದ ರಾಯಚೂರಿನ ಮಸ್ಕಿ ಸಮೀಪದ ಅಂತರಗಂಗೆ ಗ್ರಾಮದಲ್ಲಿ ಯಾವುದೇ ತಕರಾರು ಇಲ್ಲದೆ ಸರಳ ರೀತಿಯ ಮೊಹರಂ ಆಚರಣೆ ಮಾಡಲಾಯಿತು. 

ಪ್ರತಿ ವರ್ಷದಂತೆ ಈ ವರ್ಷ ಅದ್ದೂರಿಯಾಗಿ ಹಬ್ಬವು ಆಚರಣೆ ನಡೆಯಲಿಲ್ಲ. ಸರಕಾರ ಆದೇಶದಂತೆ ಸಂಜೆ 4 ಗಂಟೆಗೆ ದೇವರು ಕಳಿಸುವ ಕಾರ್ಯಕ್ರಮ ಪ್ರಾರಂಭಿಸಲಾಯಿತು. 

ಪ್ರತಿವರ್ಷದಂತೆ ಈ ವರ್ಷವೂ ಕೂಡ ಭಕ್ತ ತಮ್ಮ ಹರಕೆಗಳ ತೀರಿಸುತ್ತಾ, ಕೋವಿಡ್ ಇರುವುದರಿಂದ ಶಾಂತಿಯುತವಾಗಿ ಕಾರ್ಯಕ್ರಮ ನೆರವೇರಿಸಿದರು.

ದೇವರು ಕಂಬಾರ ಮನೆಗೆ ಹೋಗಿ ದರ್ಶನ ಮಾಡಿ ಬರೋದು ಮತ್ತು ಭಕ್ತರು ತಮ್ಮ ಹರಕೆಗಳನ್ನು ತೀರಿಸುವುದು ಇಲ್ಲಿನ ವಾಡಿಕೆ. ಮತ್ತೆ ದೇವರು ಹೋಳಿಗೆ ಹೋಗುವಾಗ ಬೆಂಕಿಯಲ್ಲಿ ದೇವರು ನಡೆದಾಡುವ ದೃಶ್ಯ ಆಕರ್ಷಣೀಯವಾದದ್ದು.

ಏನೇ ಆದರೂ ಈ ಬಾರಿ ಕೊರೊನಾ ಕರಿನೆರಳು ಹರಿದಂತೆ ಆಯ್ತು. ದೇವರ ಮನದಲ್ಲಿ ನೆನೆದು ತಮ್ಮ ಹರಕೆಗಳನ್ನು ತೀರಿಸುವ ಕಾರ್ಯಕ್ರಮ ನೆರವೇರಿತು. ಮಸ್ಕಿ ಪಟ್ಟಣ ಸೇರಿದಂತೆ ವಿವಿಧ ಮಸೀದಿಗಳಲ್ಲಿ ಸರಳಾಗಿ

ಮೋಹರಂ ಹಬ್ಬ ಆಚರಣೆ ಮಾಡಲಾಯಿತು. ಸಂತೆ ಕೆಲ್ಲೂರು ಗ್ರಾಮದಲ್ಲಿ ಬೆಳಗ್ಗೆ 5 ಗಂಟೆಗೆ ದೇವರು ಅಲ್ಲಲ್ಲಿ ಬಿಲಾಲ್ ತೆಗೆದುಕೊಳ್ಳುವಾಗ ವಿದ್ಯುತ್ ಸ್ಪರ್ಶದಿಂದ  ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು