3:59 AM Saturday4 - April 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ ರಾಜ್ಯದ ವಿಧಾನಸಭೆ ಕ್ಷೇತ್ರಗಳಲ್ಲಿಯೂ ಬದಲಾವಣೆ ಸಾಧ್ಯತೆ: ಗೃಹ ಸಚಿವ ಡಾ. ಪರಮೇಶ್ವರ್ ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ

ಇತ್ತೀಚಿನ ಸುದ್ದಿ

ಮಸ್ಕಿ: ಮುಸ್ಲಿಂಮರೇ ಇರದ ಊರಲ್ಲಿ ಭಾವೈಕ್ಯತೆಯ ಮೊಹರಂ ಆಚರಣೆ

20/08/2021, 21:24

ವಿರುಪಾಕ್ಷ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಗ್ರಾಮೀಣ ಭಾಗದ ಮುಸ್ಲಿಂ ಇರದ ಊರಾದ ರಾಯಚೂರಿನ ಮಸ್ಕಿ ಸಮೀಪದ ಅಂತರಗಂಗೆ ಗ್ರಾಮದಲ್ಲಿ ಯಾವುದೇ ತಕರಾರು ಇಲ್ಲದೆ ಸರಳ ರೀತಿಯ ಮೊಹರಂ ಆಚರಣೆ ಮಾಡಲಾಯಿತು. 

ಪ್ರತಿ ವರ್ಷದಂತೆ ಈ ವರ್ಷ ಅದ್ದೂರಿಯಾಗಿ ಹಬ್ಬವು ಆಚರಣೆ ನಡೆಯಲಿಲ್ಲ. ಸರಕಾರ ಆದೇಶದಂತೆ ಸಂಜೆ 4 ಗಂಟೆಗೆ ದೇವರು ಕಳಿಸುವ ಕಾರ್ಯಕ್ರಮ ಪ್ರಾರಂಭಿಸಲಾಯಿತು. 

ಪ್ರತಿವರ್ಷದಂತೆ ಈ ವರ್ಷವೂ ಕೂಡ ಭಕ್ತ ತಮ್ಮ ಹರಕೆಗಳ ತೀರಿಸುತ್ತಾ, ಕೋವಿಡ್ ಇರುವುದರಿಂದ ಶಾಂತಿಯುತವಾಗಿ ಕಾರ್ಯಕ್ರಮ ನೆರವೇರಿಸಿದರು.

ದೇವರು ಕಂಬಾರ ಮನೆಗೆ ಹೋಗಿ ದರ್ಶನ ಮಾಡಿ ಬರೋದು ಮತ್ತು ಭಕ್ತರು ತಮ್ಮ ಹರಕೆಗಳನ್ನು ತೀರಿಸುವುದು ಇಲ್ಲಿನ ವಾಡಿಕೆ. ಮತ್ತೆ ದೇವರು ಹೋಳಿಗೆ ಹೋಗುವಾಗ ಬೆಂಕಿಯಲ್ಲಿ ದೇವರು ನಡೆದಾಡುವ ದೃಶ್ಯ ಆಕರ್ಷಣೀಯವಾದದ್ದು.

ಏನೇ ಆದರೂ ಈ ಬಾರಿ ಕೊರೊನಾ ಕರಿನೆರಳು ಹರಿದಂತೆ ಆಯ್ತು. ದೇವರ ಮನದಲ್ಲಿ ನೆನೆದು ತಮ್ಮ ಹರಕೆಗಳನ್ನು ತೀರಿಸುವ ಕಾರ್ಯಕ್ರಮ ನೆರವೇರಿತು. ಮಸ್ಕಿ ಪಟ್ಟಣ ಸೇರಿದಂತೆ ವಿವಿಧ ಮಸೀದಿಗಳಲ್ಲಿ ಸರಳಾಗಿ

ಮೋಹರಂ ಹಬ್ಬ ಆಚರಣೆ ಮಾಡಲಾಯಿತು. ಸಂತೆ ಕೆಲ್ಲೂರು ಗ್ರಾಮದಲ್ಲಿ ಬೆಳಗ್ಗೆ 5 ಗಂಟೆಗೆ ದೇವರು ಅಲ್ಲಲ್ಲಿ ಬಿಲಾಲ್ ತೆಗೆದುಕೊಳ್ಳುವಾಗ ವಿದ್ಯುತ್ ಸ್ಪರ್ಶದಿಂದ  ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವನ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು