5:16 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಸ್ಕಿ: ಅಭಿನಂದನ್ ಸಂಸ್ಥೆಯಿಂದ ಕಾರ್ಗಿಲ್ ವಿಜಯ್ ಯಾತ್ರೆ; ಮೌನ ಪ್ರಾರ್ಥನೆ 

26/07/2021, 20:14

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿಯ ಅಭಿನಂದನ್ ಸಂಸ್ಥೆಯ ವತಿಯಿಂದ ನೂರಾರು ಸೈನಿಕರ ಬಲಿದಾನದಿಂದಾಗಿ ದೊರೆತಂತಹ ಕಾರ್ಗಿಲ್ ಯುದ್ಧದಲ್ಲಿನ ವಿಜಯದ ನೆನಪಿಗಾಗಿ ಮಸ್ಕಿಯ ದೈವದ ಕಟ್ಟೆಯಿಂದ ವಿಜಯ್ ಯಾತ್ರೆಯನ್ನು ಕೈಗೊಳ್ಳಲಾಯಿತು. ಯುದ್ಧದಲ್ಲಿ ಮರಣ ಹೊಂದಿದ  ಯೋಧರಿಗೆ ಮೌನಾಚರಣೆಯ ಮೂಲಕ ಅವರ ಆತ್ಮಕ್ಕೆ ಶಾಂತಿಯನ್ನು ಕೋರಲಾಯಿತು. ಈ ಸಮಯದಲ್ಲಿ ಮಾತನಾಡಿದ ಯುವ ನಾಯಕರಾದ ಮೌನೇಶ ನಾಯಕ, 1999 ರಲ್ಲಿ ಪಾಕಿಸ್ತಾನದೊಂದಿಗೆ ನಡೆದ ಯುದ್ಧದಲ್ಲಿ ಭಾರತವು ಗಳಿಸಿದ ಯಶಸ್ಸನ್ನು ಆಚರಿಸುತ್ತಾ ಹಾಗೂ ಆ ಗೆಲುವಿಗಾಗಿ ಪ್ರಾಣತ್ಯಾಗ ಮಾಡಿದ ವೀರಯೋಧರ ಬಲಿದಾನವನ್ನು ಸ್ಮರಿಸುತ್ತಾ ನಮ್ಮ ದೇಶದ ಕೀರ್ತಿಯನ್ನು ಹೆಚ್ಚಿಸುವ ಕಾರ್ಯಗಳನ್ನು ಮಾಡಬೇಕು. ಈ ನಿಟ್ಟಿನಲ್ಲಿ ಇಂತಹ ಕೀರ್ತಿದಾಯಕ ಕಾರ್ಯಗಳನ್ನು ಕೈಗೊಳ್ಳುತ್ತಿರುವ ಅಭಿನಂದನ್ ಸಂಸ್ಥೆಯು ಸತತವಾಗಿ ಸಾಮಾಜಿಕ ಸೇವೆಯ ಜೊತೆಗೆ ಪರಿಸರ ಸಂರಕ್ಷಣಾ ಕಾರ್ಯಗಳ ಮೂಲಕ ದೇಶ ಸೇವೆಯನ್ನು ಮಾಡುತ್ತಿರುವುದು ನಮ್ಮ ಮಸ್ಕಿಗೆ ಹೆಮ್ಮೆ ತರುವ ವಿಷಯವಾಗಿದೆ ಎಂದು ಹೇಳಿದರು. 

ಭಾರತ ಮಾತೆಗೆ ಪುಷ್ಪಾರ್ಪಣೆ ಮಾಡಿ ವಿಜಯೋತ್ಸವ ಆಚರಿಸಿ ನಂತರ ವೀರ ಯೋಧರಿಗೆ ಮೌನಾಚರಣೆಯ ಮೂಲಕ ಆತ್ಮಕ್ಕೆ ಶಾತಿಯನ್ನು ಕೋರಿ ಅಭಿನಂದನ್ ಗುರುಕುಲದ ಮಕ್ಕಳ ಜೊತೆಗೆ ಮಸ್ಕಿಯ ದೈವದ ಕಟ್ಟೆಯಿಂದ ಮಸ್ಕಿಯ ಪ್ರಮುಖ ರಸ್ತೆಯ ಮೂಲಕ ವಿಜಯ ಯಾತ್ರೆಯನ್ನು ಕೈಗೊಳ್ಳಲಾಯಿತು. ಈ ವಿಜಯ ಯಾತ್ರೆಯಲ್ಲಿ ಮಸ್ಕಿಯ ಗಣ್ಯರಾದ ಸೂಗಣ್ಣ ಬಾಳೇಕಾಯಿ, ವೆಂಕಟೇಶ ನಾಯಕ, ನಾಗರಾಜ ಯಂಬಲದ, ಮಹಾಂತೇಶ ಬ್ಯಾಳಿ, ಶಿವಪ್ರಸಾದ ಕ್ಯಾತನಟ್ಟಿ, ವಿನೋದ ಹಳ್ಳಿ, ರಾಕೇಶ ಪಾಟೀಲ್, ಅಮರೇಶ ಹರಸೂರು, ಶಿವಕುಮಾರ ಸ್ವಾಮಿ, ಅಭಿನಂದನ್ ಸಂಸ್ಥೆಯ ಸಂಸ್ಥಾಪಕರಾದ ರಾಮಣ್ಣ ಹಂಪರಗುಂದಿ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಸದಸ್ಯರು ಮತ್ತು ಮಸ್ಕಿಯ ನಾಗರೀಕರು ಭಾಗವಹಿಸಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು