2:46 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಸ್ಕಿ ಭ್ರಮರಾಂಬ ದೇವಿ ಉತ್ಸವ: ಮಹಿಳೆಯರಿಂದ ಮಹಾದೇವಿಗೆ ಮಹಾ ರಥೋತ್ಸವ

20/10/2021, 22:50

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ರಾಯಚೂರು ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಮಸ್ಕಿಯ. ಶ್ರೀ ಭ್ರಮರಾಂಬ ದೇವಿಯ ಸನ್ನಿದಾನದಲ್ಲಿ ಮೈಸೂರು ದಸರಾ ಉತ್ಸವ ಮಾದರಿಯಲ್ಲಿ ಆಚರಿಸಲಾಯಿತು.


ಶ್ರೀ ಗಚ್ಚಿನ ಹಿರೇಮಠದ ಶ್ರೀ ವರರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಮಂಗಳವಾರ ಬೆಳಗ್ಗೆ ಭ್ರಮರಾಂಬ ದೇವಿಗೆ ಪ್ರತಿ ವರ್ಷದ ಪದ್ದತಿಯಂತೆ ಈ ವರ್ಷವೂ ಕೂಡ ಕುಂಕುಮಾರ್ಚನೆ, ಕುಂಭಾಭಿಷೇಕ, ರುದ್ರಾಭಿಷೇಕ, ವಿಶೇಷ ಹೂವಿನ ಪೂಜೆ ಅಲಂಕಾರ ನೇರವೇರಿಲಾಯಿತು. ನಂತರ ಗಣಾರಾಧನೆ ಮಹಾಪ್ರಸಾದವಾದ ಬೂಂದಿ, ಅನ್ನ ಪ್ರಸಾದ ಕಾರ್ಯಕ್ರಮ ಭಕ್ತಾದಿಗಳು ಸವಿದರು. ಮಹಾದೇವಿಯ ಪಲ್ಲಕ್ಕಿ ಸೇವೆ ಜರುಗಿತು.ಸಂಜೆ 4.15ಕ್ಕೆ ಮಹಿಳೆಯರು ಸೇರಿ ತನು-ಮನ ಕಳಸ ಕನ್ನಡಿ ಭಜನಾ ಭಕ್ತಿಯೇ ಮೂಲ ಧನದಿಂದ ಭಕ್ತಿಯ ಮೂಲಕ ದೇವಿ ಕೃಪೆಗೆ ಪಾತ್ರರಾಗಿ ದರ್ಶನ ಪಡೆದರು.ಮಹಿಳೆಯರಿಂದಲೇ ಮಹಾ ರಥೋತ್ಸವ ಜರುಗುವುದು ಇಲ್ಲಿನ ವಿಶೇಷವಾಗಿದೆ.

ಮಹಾದೇವಿಯ ರಥವನ್ನು ಎಳೆಯುವ ಮೂಲಕ ತಮ್ಮಲ್ಲಿ ಭಕ್ತಿ ಭಾವವನ್ನು ಆನಂದಿಸಿದರು. ಮಸ್ಕಿ ಬಳಗಾನೂರ, ಸುಂಕನೂರ, ಕಡಬೂರ,ಗುಡದೂರ, ತುರ್ವಿಹಾಳ, ಹಸ್ಮಕಲ್,ಮೆದಿಕಿನಾಳ, ಸಂತೆಕೆಲ್ಲೂರ, ಅಂಕುಶದೂಡ್ಡಿ, ಅಂತರಗಂಗೆ, ನಾಗರಬೆಂಚಿ, ಬೈಲಗುಡ್ಡ, ಹಾಲಾಪೂರ ಹಾಗೂ ಇನ್ನಿತರ ಗ್ರಾಮದ ಭಕ್ತಾದಿಗಳು ಆಗಮಿಸಿ ಶ್ರೀ ಭ್ರಮರಾಂಬ ದೇವಿಯ ದರ್ಶನ ಪಡೆದರು.


ಕಾರ್ಯಕ್ರಮಕ್ಕೆ ಮಸ್ಕಿ ಶಾಸಕ ಬಸನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್,  ಮಹಾದೇವಪ್ಪಗೌಡ, ಪೊಲೀಸ್ ಪಾಟೀಲ್ ಮುಂತಾದವರು ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು