12:41 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಸ್ಕಿ: ಕೊರೊನಾ ಸೋಂಕಿತ ಬಡವರಿಗೆ ಆಸರೆಯಾದ ಸರಕಾರಿ ವಸತಿ ಶಾಲೆ, ಹಾಸ್ಟೆಲ್ ಗಳು!

26/05/2021, 07:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@ gmail.com

ಕೊರೊನಾ ಎಂಬ ಮಹಾಮಾರಿ ವೈರಸ್ ಇಡೀ ದೇಶವನ್ನೇ ಹಾಳು ಮಾಡಲು ನಿಂತಿದೆ. ಸಾವಿರಾರು ಜನರ ಜೀವ ಬಲಿ ಪಡೆದುಕೊಂಡು ಲಕ್ಷಾಂತರ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ. ಅಲ್ಲದೆ ಕೋವಿಡ್ ನಿಂದ ಬಳಲುತ್ತಿರುವವರು ಪ್ರತಿನಿತ್ಯ ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ಮಸ್ಕಿ ತಾಲೂಕಿನಲ್ಲಿ ನಿರ್ಮಾಣವಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರಿಗೆ ಸರಕಾರಿ ವಸತಿ ಶಾಲೆಗಳೇ ಆಸರೆಯಾಗಿದೆ.

ಕೊರೊನಾ ವೈರಸ್ ನಿಂದ ಇಡಿ ದೇಶವೇ ಸಂಕಷ್ಟಕ್ಕೆ ಸಿಲುಕಿ ಪರದಾಡುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಬಡವರ ಕುಟುಂಬದ ವಿದ್ಯಾಭ್ಯಾಸಕ್ಕಾಗಿ ಇರುವ ವಸತಿ ಶಾಲೆಗಳು,  ಹಾಸ್ಟೆಲ್ ಗಳು, ಗ್ರಾಮೀಣ ಪ್ರದೇಶದಲ್ಲಿನ ಕೋವಿಡ್ ಸೋಂಕಿತರಿಗೆ ವರದಾನವಾಗಿ ಪರಿಣಮಿಸಿದೆ. ಇದರಿಂದ ಸರಕಾರಕ್ಕೆ ಒಂದು ರೀತಿಯಲ್ಲಿ ಉಪಯೋಗವಾಗಿದೆ. ಕೋವಿಡ್ 19 ಮೊದಲ ಅಲೆಗೆ ರಾಜ್ಯದಲ್ಲಿ ಬಹುತೇಕ ಸರಕಾರಿ ವಸತಿ ನಿಲಯಗಳು ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಗುರುತಿಸಿ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬರುವಂತ ಸಾರ್ವಜನಿಕರಿಗೆ ಕೋವಿಡ್ ಕೇಂದ್ರಗಳನ್ನಾಗಿ ಮಾಡಿತ್ತು. ಅಲ್ಲೇ  15 ದಿನ ಕ್ವಾರಂಟೈನ್ ವ್ಯವಸ್ಥೆ ಮಾಡಿತ್ತು. ಇದೀಗ ಬಡ ಜನರ ಜೀವ ಉಳಿಸಲು ಸರಕಾರಿ ವಸತಿ ಶಾಲೆಗಳು ಮುಂದಾಗಿವೆ ಎನ್ನುವುದಕ್ಕೆ ಮಸ್ಕಿ ಮುರಾರ್ಜಿ ವಸತಿ ಶಾಲೆಗಳೇ ಸಾಕ್ಷಿ. 

ಇತ್ತೀಚಿನ ಸುದ್ದಿ

ಜಾಹೀರಾತು