11:06 PM Monday23 - February 2026
ಬ್ರೇಕಿಂಗ್ ನ್ಯೂಸ್
ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ…

ಇತ್ತೀಚಿನ ಸುದ್ದಿ

ಮಸ್ಕಿ: ಕೊರೊನಾ ಸೋಂಕಿತ ಬಡವರಿಗೆ ಆಸರೆಯಾದ ಸರಕಾರಿ ವಸತಿ ಶಾಲೆ, ಹಾಸ್ಟೆಲ್ ಗಳು!

26/05/2021, 07:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@ gmail.com

ಕೊರೊನಾ ಎಂಬ ಮಹಾಮಾರಿ ವೈರಸ್ ಇಡೀ ದೇಶವನ್ನೇ ಹಾಳು ಮಾಡಲು ನಿಂತಿದೆ. ಸಾವಿರಾರು ಜನರ ಜೀವ ಬಲಿ ಪಡೆದುಕೊಂಡು ಲಕ್ಷಾಂತರ ಜನರನ್ನು ನಿರುದ್ಯೋಗಿಗಳನ್ನಾಗಿ ಮಾಡಿದೆ. ಅಲ್ಲದೆ ಕೋವಿಡ್ ನಿಂದ ಬಳಲುತ್ತಿರುವವರು ಪ್ರತಿನಿತ್ಯ ಚಿಕಿತ್ಸೆಗಾಗಿ ಪರದಾಡುವ ಪರಿಸ್ಥಿತಿ ಮಸ್ಕಿ ತಾಲೂಕಿನಲ್ಲಿ ನಿರ್ಮಾಣವಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರಿಗೆ ಸರಕಾರಿ ವಸತಿ ಶಾಲೆಗಳೇ ಆಸರೆಯಾಗಿದೆ.

ಕೊರೊನಾ ವೈರಸ್ ನಿಂದ ಇಡಿ ದೇಶವೇ ಸಂಕಷ್ಟಕ್ಕೆ ಸಿಲುಕಿ ಪರದಾಡುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಬಡವರ ಕುಟುಂಬದ ವಿದ್ಯಾಭ್ಯಾಸಕ್ಕಾಗಿ ಇರುವ ವಸತಿ ಶಾಲೆಗಳು,  ಹಾಸ್ಟೆಲ್ ಗಳು, ಗ್ರಾಮೀಣ ಪ್ರದೇಶದಲ್ಲಿನ ಕೋವಿಡ್ ಸೋಂಕಿತರಿಗೆ ವರದಾನವಾಗಿ ಪರಿಣಮಿಸಿದೆ. ಇದರಿಂದ ಸರಕಾರಕ್ಕೆ ಒಂದು ರೀತಿಯಲ್ಲಿ ಉಪಯೋಗವಾಗಿದೆ. ಕೋವಿಡ್ 19 ಮೊದಲ ಅಲೆಗೆ ರಾಜ್ಯದಲ್ಲಿ ಬಹುತೇಕ ಸರಕಾರಿ ವಸತಿ ನಿಲಯಗಳು ಸೇರಿದಂತೆ ಇನ್ನಿತರ ಸ್ಥಳಗಳಲ್ಲಿ ಗುರುತಿಸಿ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಬರುವಂತ ಸಾರ್ವಜನಿಕರಿಗೆ ಕೋವಿಡ್ ಕೇಂದ್ರಗಳನ್ನಾಗಿ ಮಾಡಿತ್ತು. ಅಲ್ಲೇ  15 ದಿನ ಕ್ವಾರಂಟೈನ್ ವ್ಯವಸ್ಥೆ ಮಾಡಿತ್ತು. ಇದೀಗ ಬಡ ಜನರ ಜೀವ ಉಳಿಸಲು ಸರಕಾರಿ ವಸತಿ ಶಾಲೆಗಳು ಮುಂದಾಗಿವೆ ಎನ್ನುವುದಕ್ಕೆ ಮಸ್ಕಿ ಮುರಾರ್ಜಿ ವಸತಿ ಶಾಲೆಗಳೇ ಸಾಕ್ಷಿ. 

ಇತ್ತೀಚಿನ ಸುದ್ದಿ

ಜಾಹೀರಾತು