9:41 PM Sunday23 - November 2025
ಬ್ರೇಕಿಂಗ್ ನ್ಯೂಸ್
ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ

ಇತ್ತೀಚಿನ ಸುದ್ದಿ

ಮಸ್ಕಿ: ಹೃದಯಾಘಾತಕ್ಕೆ ಶಿಕ್ಷಕ ಬಲಿ; ಮೊದಲ ತರಗತಿ ಮುಗಿಸಿದ್ದ ಅಧ್ಯಾಪಕ; ಮುಗಿಲು ಮುಟ್ಟಿದ ಸಿಬ್ಬಂದಿ, ವಿದ್ಯಾರ್ಥಿಗಳ ಆಕ್ರಂದನ

26/12/2023, 20:55

ವೀರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪ್ರಭಾರ ಮುಖ್ಯ ಶಿಕ್ಷಕ ಶಾಲೆಯಲ್ಲೇ ಹಠಾತ್ ಹೃದಯಘಾತದಿಂದ ಮೃತಪಟ್ಟ ಘಟನೆ ಗದ್ರಟಗಿ ಗ್ರಾಮದಲ್ಲಿ ಜರುಗಿದ್ದು, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗದ್ರಟಗಿ ಗ್ರಾಮದ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯಶಿಕ್ಷಕ ಸುರೇಶ(57) ಹೃದಯಘಾತದಿಂದ ಮೃತಪಟ್ಟಿದ್ದಾರೆ. ಶಾಲೆ ಆರಂಭವಾಗುತ್ತಿದ್ದಂತೆ ಮೊದಲ ತರಗತಿ ಮುಗಿಸಿಕೊಂಡು ಬಂದು ಕಚೇರಿಯಲ್ಲಿ ಕುಳಿತ್ತಿದ್ದ ಮುಖ್ಯೋಪಾಧ್ಯಾಯ ಸುರೇಶ ಅವರು, ಶಾಲೆಗೆ ಸಂಬಂಧಿಸಿದ ಮಾಹಿತಿ ಪುಸ್ತಕದಲ್ಲಿ ಬರೆಯುತ್ತಿದ್ದರು, ಈ ವೇಳೆ ಹಠಾತ್ ಹೃದಯಾಘಾತವಾಗಿದೆ. ಕುಳಿತ ಛೇರಿನ ಮೇಲೆಯ ಮೃತಪಟ್ಟಿದ್ದಾರೆ.


ಹಠಾತ್ ನಿಧನದಿಂದ ಶಾಲೆಯ ಶಿಕ್ಷಕರು, ಇಡೀ ಶಾಲೆ ಮಕ್ಕಳ ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಮೃತ ಶಿಕ್ಷಕನಿಗೆ ಪತ್ನಿ, ಮೂವರು ಪುತ್ರರು ಇದ್ದು,‌ಮೂಲತಃ ರಾಣೆಬೆನ್ನೂರಿನವರಾಗಿದ್ದಾರೆ. ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿಗೆ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು