11:31 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಸ್ಕಿ: ಹೃದಯಾಘಾತಕ್ಕೆ ಶಿಕ್ಷಕ ಬಲಿ; ಮೊದಲ ತರಗತಿ ಮುಗಿಸಿದ್ದ ಅಧ್ಯಾಪಕ; ಮುಗಿಲು ಮುಟ್ಟಿದ ಸಿಬ್ಬಂದಿ, ವಿದ್ಯಾರ್ಥಿಗಳ ಆಕ್ರಂದನ

26/12/2023, 20:55

ವೀರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಪ್ರಭಾರ ಮುಖ್ಯ ಶಿಕ್ಷಕ ಶಾಲೆಯಲ್ಲೇ ಹಠಾತ್ ಹೃದಯಘಾತದಿಂದ ಮೃತಪಟ್ಟ ಘಟನೆ ಗದ್ರಟಗಿ ಗ್ರಾಮದಲ್ಲಿ ಜರುಗಿದ್ದು, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳ ಆಕ್ರಂದನ ಮುಗಿಲು ಮುಟ್ಟಿತ್ತು.
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗದ್ರಟಗಿ ಗ್ರಾಮದ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಭಾರ ಮುಖ್ಯಶಿಕ್ಷಕ ಸುರೇಶ(57) ಹೃದಯಘಾತದಿಂದ ಮೃತಪಟ್ಟಿದ್ದಾರೆ. ಶಾಲೆ ಆರಂಭವಾಗುತ್ತಿದ್ದಂತೆ ಮೊದಲ ತರಗತಿ ಮುಗಿಸಿಕೊಂಡು ಬಂದು ಕಚೇರಿಯಲ್ಲಿ ಕುಳಿತ್ತಿದ್ದ ಮುಖ್ಯೋಪಾಧ್ಯಾಯ ಸುರೇಶ ಅವರು, ಶಾಲೆಗೆ ಸಂಬಂಧಿಸಿದ ಮಾಹಿತಿ ಪುಸ್ತಕದಲ್ಲಿ ಬರೆಯುತ್ತಿದ್ದರು, ಈ ವೇಳೆ ಹಠಾತ್ ಹೃದಯಾಘಾತವಾಗಿದೆ. ಕುಳಿತ ಛೇರಿನ ಮೇಲೆಯ ಮೃತಪಟ್ಟಿದ್ದಾರೆ.


ಹಠಾತ್ ನಿಧನದಿಂದ ಶಾಲೆಯ ಶಿಕ್ಷಕರು, ಇಡೀ ಶಾಲೆ ಮಕ್ಕಳ ಮತ್ತು ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಮೃತ ಶಿಕ್ಷಕನಿಗೆ ಪತ್ನಿ, ಮೂವರು ಪುತ್ರರು ಇದ್ದು,‌ಮೂಲತಃ ರಾಣೆಬೆನ್ನೂರಿನವರಾಗಿದ್ದಾರೆ. ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿಗೆ ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು