11:18 PM Thursday26 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು

26/02/2026, 23:18

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಜಗದ್ಗುರು ಶಿವ ಶಕ್ತಿ ಪೀಠದ ಸುಕ್ಷೇತ್ರ ಇರಕಲ್ ಮಠದ ಶ್ರೀ ಬಸವ ಪ್ರಭು ಪೂಜ್ಯರಿಂದ ಪ್ರತಿ ವರ್ಷದಂತೆ ಈ ವರ್ಷವೂ 26ನೇ ವರ್ಷದ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು.


ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಮುದುಗಲ್ ಶ್ರೀ ಮಹಾಂತ ಸ್ವಾಮೀಜಿ ಸಾಲಿಮಠ ಕಲ್ಯಾಣ ಆಶ್ರಮ ತಿಮ್ಮಾಪುರ ಮಾತನಾಡಿ ಜೀವನದಲ್ಲಿ ಮಾಡಿದ ಪಾಪಗಳು ದೂರವಾಗಬೇಕಾದರೆ
ಶರಣರ ದರ್ಶನ ಶರಣರ ಪ್ರವಚನ ಕೇಳುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ಸಿಗುತ್ತದೆ ಹಾಗೂ ಮಾಡಿದ ಪಾಪಗಳು ದೂರವಾಗುತ್ತವೆ ಎಂದು ಸಲಹೆ ನೀಡಿದರು.
ನಾಡಿನ ಅರ ಗುರು ಚರಮೂರ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಅನಿಸಿಕೆಗಳನ್ನು ಹೇಳಲಾಯಿತು.
ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಮಾತನಾಡಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ಬಹಳ ಸಂತೋಷದ ವಿಷಯ ಪ್ರತಿ ವರ್ಷವೂ ಇದೇ ತರ ಶ್ರೀಮಠದಲ್ಲಿ ನಡೆಯಲಿ ನಾವು ಜೊತೆಗಿರುತ್ತೇವೆ ಎಂದು ಭರವಸೆ ನೀಡಿದರು.
ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು.

*ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ:*
12 ನವ ಜೋಡಿಗಳ ಸಾಮೂಹಿಕ ವಿವಾಹಕ್ಕೆ ಪೂಜ್ಯರಿಂದ ನವ ಜೋಡಿಗಳಿಗೆ ಆಶಿರ್ವಾದಿಸಿ ಅವರ ಜೀವನ ಸುಖವಾಗಿರಲೆಂದು ಶುಭ ಹಾರೈಸಿದರು.
ಆರೋಗ್ಯ ಜಾತ್ರೆ ಪರಿಸರ ಜಾತ್ರೆ ಸುಜ್ಞಾನ ಸಂಗಮ ಕ್ರೀಡಾ ಜಾತ್ರೆ ಇನ್ನು ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು .
ದೂರ ದೂರಗಳಿಂದ ಭಕ್ತಾದಿಗಳ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದು ಪುನೀತರಾದರು.

ಇತ್ತೀಚಿನ ಸುದ್ದಿ

ಜಾಹೀರಾತು