4:14 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಮಸ್ಕಿಯ ಕೂಲಿ ಕಾರ್ಮಿಕನ ಪುತ್ರಿಯ ಸಾಧನೆ: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಕಮಲಾಕ್ಷಿಗೆ ಚಿನ್ನದ ಪದಕ

11/01/2022, 15:31

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ತೀರ್ಥಭಾವಿ ಗ್ರಾಮದ ಕೂಲಿ ಕಾರ್ಮಿಕನ ಮಗಳು ದೆಹಲಿಯಲ್ಲಿ ನಡೆದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದಿದ್ದಾಳೆ.

800 ಸ್ಪರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿದ್ದ ಕಮಲಾಕ್ಷಿ ಪ್ರಥಮ ಬಹುಮಾನ ಪಡೆಯುವ ಮೂಲಕ ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. 

ಮಸ್ಕಿ ತಾಲೂಕಿನ ತೀರ್ಥಭಾವಿ ಗ್ರಾಮದ ದ್ಯಾಮನಗೌಡ- ನಾಗಮ್ಮ ಅವರ ಮಗಳಾದ ಕಮಲಾಕ್ಷಿಗೆ ಈ ದಂಪತಿ ಸಾಲಸೋಲ ಮಾಡಿ ಮಸ್ಕಿಯ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಲು ಸೇರಿಸಿದ್ದರು. ಪ್ರಸ್ತುತ ಮಸ್ಕಿಯ ದೇವನಾಮಪ್ರಿಯ ಅಶೋಕ ಪದವಿ ಕಾಲೇಜಿನಲ್ಲಿ ಬಿಎ ಪದವಿ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ಚಿನ್ನದ ಪದಕ ಪಡೆದ ಸಂತಸದಲ್ಲಿ ರಿಪೋರ್ಟರ್ ಕರ್ನಾಟಕ ಜತೆ ಮಾತನಾಡಿದ ಕಮಲಾಕ್ಷಿ, ತನಗೆ ವಿದ್ಯಾಭ್ಯಾಸದ ಜೊತೆಗೆ ರಾಜ್ಯಮಟ್ಟ ರಾಷ್ಟ್ರಮಟ್ಟದ ಚಾಂಪಿಯನ್ ಆಗಬೇಕೆಂಬ ಕನಸು ಇದೆ ಎಂದು ಹೇಳಿದ್ದಾಳೆ.

ಇತ್ತೀಚಿನ ಸುದ್ದಿ

ಜಾಹೀರಾತು