9:54 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಮಸ್ಕಿ ಲಾಕ್ ಡೌನ್ ಸಂಪೂರ್ಣ ಯಶಸ್ವಿ: ವಾಹನ  ಸವಾರರಿಗೆ ಬಿಸಿ ಮುಟ್ಟಿಸಿದ ಖಾಕಿ ಅಧಿಕಾರಿಗಳು

17/05/2021, 18:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka news@gmail.com

ಕೋವಿಡ್ 19 ನಿಯಂತ್ರಣಕಾಗಿ ಬಿಗಿ ಬಂದೋಬಸ್ತ್ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಆದೇಶದಂತೆ  ಮಸ್ಕಿ ತಾಲೂಕಿನಾದ್ಯಂತ ಸಂಪೂರ್ಣ ಲಾಕ್ ಡೌನ್ ಯಶಸ್ವಿಯಾಗಿದೆ.  


ಪಟ್ಟಣ ಸೇರಿದಂತೆ ಮಸ್ಕಿ ತಾಲೂಕಿನ ಬೆಳ್ಳಂಬೆಳಗ್ಗೆ ಬೀದಿಗಿಳಿದ ಪೊಲೀಸ್ ಸಿಪಿಐ ದೀಪಕ್ ಬೋಸು ರೆಡ್ಡಿ, ಪಿಎಸ್ಐ ಸಿದ್ದರಾಮ ಬಿದರಾಣಿ ನೇತೃತ್ವದಲ್ಲಿ ಪೊಲೀಸರು  ಮತ್ತು ಪುರಸಭೆ ಸಿಬ್ಬಂದಿ ಪ್ರಮುಖ ರಸ್ತೆಗಳಲ್ಲಿ ಗಸ್ತು ನಡೆಸಿ ಕೋವಿಡ್ ನಿಯಮ ಉಲ್ಲಂಘಿಸಿ ರಸ್ತೆಗೆ ಬಂದ ವಾಹನ ಸವಾರರಿಗೆ ಹಾಗೂ ಅಂಗಡಿಗಳನ್ನು ತೆರೆದಿದ್ದ ಮಾಲೀಕರಿಗೆ ಬಿಸಿ ಮುಟ್ಟಿಸಿದರು. ಪ್ರಮುಖ ರಸ್ತೆಗಳಿಗೆ ಬ್ಯಾರಿಕೇಡ್ ಹಾಕಿ ಎಲ್ಲ ರಸ್ತೆಗಳನ್ನು ಲಾಕ್ ಮಾಡಲಾಗಿತ್ತು. ಕೆಲವೊಂದು ಕಡೆ ಸಾರ್ವಜನಿಕರು ಬಾರಿ ಗೇಟುಗಳನ್ನು ಕಿತ್ತುಹಾಕಿದರು. ಜನರು ವಾಹನ ಚಲಾಯಿಸಿಕೊಂಡು ಹೋಗುವುದು ಕಂಡುಬಂದಿತ್ತು. ಅಂತವರಿಗೆ ಪೊಲೀಸರು ಎಚ್ಚರಿಕೆ ನೀಡಿ ಮರಳಿ ಮನೆಗೆ ಹೋಗುವಂತೆ ಕಳಿಸಿದರು. ಪಟ್ಟಣದ ಮುಖ್ಯರಸ್ತೆಗಳಲ್ಲಿ ಅಶೋಕ ವೃತ್ತ, ಕನಕ ವೃತ್ತ, ವಾಲ್ಮೀಕಿ ವೃತ್ತ, ಮೇನ್ ಬಜಾರ್ ಸೇರಿದಂತೆ ಎಲ್ಲ ರಸ್ತೆಗಳು ಜನ ಇಲ್ಲದೆ ಬಿಕೋ ಎನ್ನುವ ದೃಶ್ಯ ಕಂಡುಬಂತು. ಅಲ್ಲೊಂದು ಇಲ್ಲೊಂದು ಅಲ್ಲೊಂದು ಇಲ್ಲೊಂದು ವಾಹನ ತಿರುಗಾಡುತ್ತಿ ಕಂಡುಬಂದಿತ್ತು. ಅಂತಹ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದು ದಂಡ ಹಾಕಿ ಕಳಿಸುವ ದೃಶ್ಯ ಕಂಡು ಬಂತು. ಪುರಸಭೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ನೇತೃತ್ವದಲ್ಲಿ ನೇತೃತ್ವದಲ್ಲಿ ಪುರಸಭೆ ಸಿಬ್ಬಂದಿ ಸಿಬ್ಬಂದಿ ಧ್ವನಿವರ್ಧಕ ಮೂಲಕ ಸಾರ್ವಜನಿಕರಿಗೆ  ಲಾಕ್ ಡೌನ್ ಇದ್ದು ಅಂಗಡಿಗಳನ್ನು ತೆರೆಯದಂತೆ ಮನವಿ ಮಾಡುವುದು ಕಂಡುಬಂದಿತ್ತು ಮಸ್ಕಿ ಕ್ಷೇತ್ರದ ಮೆದಿಕಿನಾಳ ಅಂತರಗಂಗೆ ನಾಗರಬೆಂಚಿ ಮಸ್ಕಿ ತಾಂಡಾ ಸೇರಿದಂತೆ ಜನ ಗುಂಪು ಗುಂಪು ಕೊಡುವುದನ್ನು ಬಿಡಬೇಕೆಂದು ಪೊಲೀಸರು ಮುನ್ನೆಚ್ಚರಿಕೆ ನೀಡಿದರು ತಸಿಲ್ದಾರ್ ಬಲರಾಮ್ ಕಟ್ಟಿಮನಿ ಸಿಪಿಐ ದೀಪಕ್ ಬೋಸರಾಜ್ ಪಿಎಸ್ಐ ಸಿದ್ದರಾಮ ಬಿದರಾಣಿ ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ್ ಸೇರಿದಂತೆ ಇನ್ನಿತರ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡುವ ದೃಶ್ಯ ಕಂಡುಬಂದಿತು.

ಇತ್ತೀಚಿನ ಸುದ್ದಿ

ಜಾಹೀರಾತು