7:36 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಮಸ್ಕಿ: ಮಕ್ಕಳ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಗ್ರಾಮೀಣ ಭಾಷಾ ಕಮ್ಮಟ

31/08/2021, 20:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಇಂದಿನ ಆಧುನಿಕ ಶಿಕ್ಷಣದಿಂದ ಇಸ್ತ್ರೀ ಮಾಡಿದ ಭಾಷೆಯತ್ತ ಹೊರಳುತ್ತಿರುವ ಸಾಹಿತ್ಯ ಕೃಷಿಯನ್ನು ನೆಲದ ಭಾಷೆಯತ್ತ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಗ್ರಾಮೀಣ ಭಾಷಾ ಕಮ್ಮಟ ಅತಿ ಉಪಯುಕ್ತ ಎಂದು ಅಮರೇಶ ನುಗಡೋಣಿ ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಗ್ರಾಮೀಣ ಭಾಷಾ ಕಮ್ಮಟ ಆಯೋಜಿಸಿರುವ ಮಕ್ಕಳ ಸಾಹಿತ್ಯ ಪರಿಷತ್ ಮಸ್ಕಿ ಘಟಕದ ರವಿಚಂದ್ರ ಅವರ ಕಾರ್ಯ ಶ್ಲಾಘನೀಯ ಎಂದರು.

ಕನ್ನಡ ಕಾಯಕ ವರ್ಷಾಚರಣೆ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಮಸ್ಕಿ ಘಟಕ  ಮಸ್ಕಿ ಪಟ್ಟಣದಲ್ಲಿ ವಿದ್ಯಾರ್ಥಿಗಳಿಗಾಗಿ ಗ್ರಾಮೀಣ ಭಾಷ ಕಮ್ಮಟವನ್ನು ಎರಡು ದಿನಗಳ ಕಾಲ ಹಮ್ಮಿಕೊಂಡಿದೆ. ವಿಶೇಷ ಗೋಷ್ಠಿಗಳನ್ನು ಏರ್ಪಡಿಸಿದೆ.

ಮಸ್ಕಿ ಘಟಕದ ಅಧ್ಯಕ್ಷ ರವಿಚಂದ್ರ ಅವರು ಪ್ರಾಸ್ತಾವಿಕ ಮಾತನಾಡಿ, ನೆಲಮೂಲದ ಗ್ರಾಮೀಣ ಸಂವೇದನೆಗಳನ್ನು ಹಿಡಿದಿಡಲು, ಗ್ರಾಮೀಣ ಭಾಷೆಯ ವೈವಿಧ್ಯತೆ ಮತ್ತು ಸೊಗಡನ್ನು ಉಳಿಸಲು, ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಭಾಷೆಯ ಕುರಿತು ಅಭಿಮಾನ ಮೂಡಿಸಲು, ವಿದ್ಯಾರ್ಥಿಗಳು ತಮ್ಮ ಸಾಹಿತ್ಯಕೃಷಿಯಲ್ಲಿ ಗ್ರಾಮೀಣ ಭಾಷೆಯನ್ನು ಬಳಸುವಂತೆ ಪ್ರೇರೇಪಿಸಲು ಈ ಗ್ರಾಮೀಣ ಭಾಷಿಕ ಮಟ್ಟವನ್ನು ಮಸ್ಕಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಾನಪದ ಕಲಾವಿದ ಹುಚ್ಚಪ್ಪ ಮದ್ನಾಳ ಡೊಳ್ಳಿನ ಪದಗಳನ್ನು ಹಾಡಿದರು. ಮಲ್ಕಾಪುರ ದ ವಿದ್ಯಾರ್ಥಿಗಳು ಜಾನಪದ ಗೀತೆಗಳನ್ನು ಹಾಡಿದರು. ವೀರೇಶ್ ಸೌದ್ರಿಯವರು ಅತಿಥಿ ನುಡಿಗಳನ್ನು ಮಾತನಾಡಿದರು.

ಮಾಹಂತೇಶ್ ಮಸ್ಕಿ ಅಧ್ಯಕ್ಷತೆ ವಹಿಸಿದ್ದು ಮಕ್ಕಳ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯವನ್ನು ಶ್ಲಾಘಿಸಿದರು. ಸಾಹಿತಿ ಗುಂಡುರಾವ್ ದೇಸಾಯಿ, ಆದಪ್ಪ ಹೆಂಬ, ಪಂಪನ ಗೌಡ ಪಾಟೀಲ್, ಘನಮಠದಯ್ಯ ಶಂಕರಗೌಡ ಪಾಟೀಲ್, ಬಾಲಸ್ವಾಮಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಂಜುನಾಥ್ ಸ್ವಾಮಿ ಸ್ವಾಗತಿಸಿದರು. ಮಂಜುನಾಥ್ ಹಾಲಾಪುರ ನಿರೂಪಿಸಿದರು, ಸಿದ್ದಾರ್ಥ ಪಾಟೀಲ್ ವಂದಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು