3:18 AM Friday20 - September 2024
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,…

ಇತ್ತೀಚಿನ ಸುದ್ದಿ

ಮಸ್ಕಿ: ಮಕ್ಕಳ ಪರಿಷತ್ ನಿಂದ ವಿದ್ಯಾರ್ಥಿಗಳಿಗೆ ಗ್ರಾಮೀಣ ಭಾಷಾ ಕಮ್ಮಟ

31/08/2021, 20:47

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಇಂದಿನ ಆಧುನಿಕ ಶಿಕ್ಷಣದಿಂದ ಇಸ್ತ್ರೀ ಮಾಡಿದ ಭಾಷೆಯತ್ತ ಹೊರಳುತ್ತಿರುವ ಸಾಹಿತ್ಯ ಕೃಷಿಯನ್ನು ನೆಲದ ಭಾಷೆಯತ್ತ ಕೊಂಡೊಯ್ಯಲು ವಿದ್ಯಾರ್ಥಿಗಳಿಗೆ ಗ್ರಾಮೀಣ ಭಾಷಾ ಕಮ್ಮಟ ಅತಿ ಉಪಯುಕ್ತ ಎಂದು ಅಮರೇಶ ನುಗಡೋಣಿ ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಗ್ರಾಮೀಣ ಭಾಷಾ ಕಮ್ಮಟ ಆಯೋಜಿಸಿರುವ ಮಕ್ಕಳ ಸಾಹಿತ್ಯ ಪರಿಷತ್ ಮಸ್ಕಿ ಘಟಕದ ರವಿಚಂದ್ರ ಅವರ ಕಾರ್ಯ ಶ್ಲಾಘನೀಯ ಎಂದರು.

ಕನ್ನಡ ಕಾಯಕ ವರ್ಷಾಚರಣೆ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಪ್ರಾಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಮಸ್ಕಿ ಘಟಕ  ಮಸ್ಕಿ ಪಟ್ಟಣದಲ್ಲಿ ವಿದ್ಯಾರ್ಥಿಗಳಿಗಾಗಿ ಗ್ರಾಮೀಣ ಭಾಷ ಕಮ್ಮಟವನ್ನು ಎರಡು ದಿನಗಳ ಕಾಲ ಹಮ್ಮಿಕೊಂಡಿದೆ. ವಿಶೇಷ ಗೋಷ್ಠಿಗಳನ್ನು ಏರ್ಪಡಿಸಿದೆ.

ಮಸ್ಕಿ ಘಟಕದ ಅಧ್ಯಕ್ಷ ರವಿಚಂದ್ರ ಅವರು ಪ್ರಾಸ್ತಾವಿಕ ಮಾತನಾಡಿ, ನೆಲಮೂಲದ ಗ್ರಾಮೀಣ ಸಂವೇದನೆಗಳನ್ನು ಹಿಡಿದಿಡಲು, ಗ್ರಾಮೀಣ ಭಾಷೆಯ ವೈವಿಧ್ಯತೆ ಮತ್ತು ಸೊಗಡನ್ನು ಉಳಿಸಲು, ವಿದ್ಯಾರ್ಥಿಗಳಲ್ಲಿ ಗ್ರಾಮೀಣ ಭಾಷೆಯ ಕುರಿತು ಅಭಿಮಾನ ಮೂಡಿಸಲು, ವಿದ್ಯಾರ್ಥಿಗಳು ತಮ್ಮ ಸಾಹಿತ್ಯಕೃಷಿಯಲ್ಲಿ ಗ್ರಾಮೀಣ ಭಾಷೆಯನ್ನು ಬಳಸುವಂತೆ ಪ್ರೇರೇಪಿಸಲು ಈ ಗ್ರಾಮೀಣ ಭಾಷಿಕ ಮಟ್ಟವನ್ನು ಮಸ್ಕಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜಾನಪದ ಕಲಾವಿದ ಹುಚ್ಚಪ್ಪ ಮದ್ನಾಳ ಡೊಳ್ಳಿನ ಪದಗಳನ್ನು ಹಾಡಿದರು. ಮಲ್ಕಾಪುರ ದ ವಿದ್ಯಾರ್ಥಿಗಳು ಜಾನಪದ ಗೀತೆಗಳನ್ನು ಹಾಡಿದರು. ವೀರೇಶ್ ಸೌದ್ರಿಯವರು ಅತಿಥಿ ನುಡಿಗಳನ್ನು ಮಾತನಾಡಿದರು.

ಮಾಹಂತೇಶ್ ಮಸ್ಕಿ ಅಧ್ಯಕ್ಷತೆ ವಹಿಸಿದ್ದು ಮಕ್ಕಳ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯವನ್ನು ಶ್ಲಾಘಿಸಿದರು. ಸಾಹಿತಿ ಗುಂಡುರಾವ್ ದೇಸಾಯಿ, ಆದಪ್ಪ ಹೆಂಬ, ಪಂಪನ ಗೌಡ ಪಾಟೀಲ್, ಘನಮಠದಯ್ಯ ಶಂಕರಗೌಡ ಪಾಟೀಲ್, ಬಾಲಸ್ವಾಮಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಂಜುನಾಥ್ ಸ್ವಾಮಿ ಸ್ವಾಗತಿಸಿದರು. ಮಂಜುನಾಥ್ ಹಾಲಾಪುರ ನಿರೂಪಿಸಿದರು, ಸಿದ್ದಾರ್ಥ ಪಾಟೀಲ್ ವಂದಿಸಿದರು. 

ಇತ್ತೀಚಿನ ಸುದ್ದಿ

ಜಾಹೀರಾತು