8:29 AM Thursday10 - July 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ… ಕೊಪ್ಪ ಮೊರಾರ್ಜಿ‌ ವಸತಿ ಶಾಲೆಯ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಪ್ರಿನ್ಸಿಪಾಲ್, ವಾರ್ಡನ್ ಅಮಾನತು:… ಕೊಲೆ ಪ್ರಕರಣ: ಯೆಮೆನ್‌ನಲ್ಲಿ ಮರಣ ದಂಡನೆಗೆ ಒಳಗಾಗಿರುವ ಕೇರಳದ ನರ್ಸ್ ನಿಮಿಷಾಗೆ ಜುಲೈ… ನಂಜ ಈ ಪಣಿ ಮಾಡಿತಾಮಿ ಸಾರೂ: ವಿರಾಜಪೇಟೆ ಶಾಸಕರ ಮುಂದೆ ಕೆದರಿದ ಕೂದಲಿನ,… ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ…

ಇತ್ತೀಚಿನ ಸುದ್ದಿ

ಮಸ್ಕಿ ಪಟ್ಟಣದಲ್ಲಿ ಹೆಚ್ಚುತ್ತಿರುವ ಗೋವುಗಳ ಮಾರಣ ಹೋಮ: ಪುರಸಭೆ ಮುಖ್ಯಾಧಿಕಾರಿಗಳು ಘೋರ ಮೌನ

28/09/2021, 09:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕು ಕೇಂದ್ರದಲ್ಲಿ ವಾಹನ ಚಾಲಕರ ನಿರ್ಲಕ್ಷ ಹಾಗೂ ಜಾನುವಾರು ಮಾಲೀಕರ ಉಡಾಫೆತನದಿಂದ ಗೋವುಗಳನ್ನು ಸಾವು ಜಾಸ್ತಿಯಾಗುತ್ತಿದ್ದು, ನಾಗರಿಕರು ಕಳವಳ ವ್ಯಕ್ತಪಡಿಸಿದ್ದಾರೆ.

ಮಸ್ಕಿ ಪಟ್ಟಣದ ರಸ್ತೆ ದುರಂತಗಳಲ್ಲಿ ಗೋವುಗಳ ಸಾವು ಹೆಚ್ಚಾಗುತ್ತಿರುವ ಕುರಿತು ಮಾತನಾಡಿದ  ಹಿಂದೂ ಮುಖಂಡ ರಾಕೇಶ್ ಪಾಟೀಲ್, ಹೆತ್ತ ತಾಯಿಯು ಒಂದೇ ಗೋತಾಯಿಯೂ ಒಂದೇ. ಚಿಕ್ಕವರಿದ್ದಾಗ ತಾಯಿಯ ಎದೆ ಹಾಲನ್ನು ಕುಡಿದಿದ್ದೇವೆ.
ಸಾಯುವವರೆಗೂ ಗೋಮಾತೆಯ ಹಾಲನ್ನು ಕುಡಿಯುತ್ತೇವೆ. ಹಾಗಾಗಿ ಇಬ್ಬರು ನಮಗೆ ದೇವರ ಸಮಾನ. ಅಂತಹ ಕೋಟ್ಯಾನುಕೋಟಿ ದೇವತೆಗಳನ್ನು ಹೊಂದಿರುವ ಗೋ ತಾಯಿಯ ಈ ಪರಿಸ್ಥಿತಿಯನ್ನು ನಮಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಇದಕ್ಕೆ  ಸೂಕ್ತ ಪರಿಹಾರ ನೀಡುವಲ್ಲಿ ಪುರಸಭೆಯ ಮುಖ್ಯಾಧಿಕಾರಿ ವಿಫಲರಾಗಿದ್ದಾರೆ. ಗೋವುಗಳ ಸಾವಿಗೆ ತಕ್ಷಣವೆ ಕ್ರಮ ತೆಗೆದುಕೊಳ್ಳದಿದ್ದರೆ ಪುರಸಭೆ ಕಚೇರಿಗೆ  ಮುತ್ತಿಗೆ ಹಾಕಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆದರೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ಯಾವುದೇ ಕಾರ್ಯ ಇನ್ನುವರೆಗೂ ಮಾಡಿಲ್ಲ ಇದಕ್ಕೆ ಸಂಬಂಧಪಟ್ಟ ಬಿಡಾಡಿ ದನಗಳ ಮಾರಣಹೋಮ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ರಾಕೇಶ್ ಅವುಗಳನ್ನು ಸಂಸ್ಕಾರ ಮಾಡಿ ಮಾನವತೆ ಮೆರೆದಿದ್ದಾರೆ. ಮಸ್ಕಿ ಹಳ್ಳದ ಸೇತುವೆ ಮೇಲೆ ಹೆದ್ದಾರಿ ಬಸ್ಸುಗಳು ಜನಗಳ ಮೇಲೆ ಎಷ್ಟೋ ಬಾರಿ ಹೊಡೆದುಕೊಂಡು ಹೋಗಿದ್ದಾರೆ.  ಇಂತಿಷ್ಟು ಪುರಸಭೆ ಅಧಿಕಾರಿಗಳಿಗೆ ಕಾಳಜಿ ಇಲ್ಲ. ದಿನದಿಂದ ದಿನಕ್ಕೆ ಸಾಯುತ್ತಿರುವ ದನಗಳಿಗೆ ಹೊಣೆ ಯಾರು ಎಂಬಂತೆ ಗೋಮಾತೆ ದೇವರಿಗೆ ಸಮಾನ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗೋಶಾಲೆಗೆ ದನಗಳನ್ನು ಒಪ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಧರಣಿ ಹೋರಾಟ ಮಾಡುವುದಾಗಿ ಯುವ ಮುಖಂಡ ರಾಕೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು