8:07 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,…

ಇತ್ತೀಚಿನ ಸುದ್ದಿ

ಮಸ್ಕಿ ಪಟ್ಟಣದಲ್ಲಿ ಹೆಚ್ಚುತ್ತಿರುವ ಗೋವುಗಳ ಮಾರಣ ಹೋಮ: ಪುರಸಭೆ ಮುಖ್ಯಾಧಿಕಾರಿಗಳು ಘೋರ ಮೌನ

28/09/2021, 09:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕು ಕೇಂದ್ರದಲ್ಲಿ ವಾಹನ ಚಾಲಕರ ನಿರ್ಲಕ್ಷ ಹಾಗೂ ಜಾನುವಾರು ಮಾಲೀಕರ ಉಡಾಫೆತನದಿಂದ ಗೋವುಗಳನ್ನು ಸಾವು ಜಾಸ್ತಿಯಾಗುತ್ತಿದ್ದು, ನಾಗರಿಕರು ಕಳವಳ ವ್ಯಕ್ತಪಡಿಸಿದ್ದಾರೆ.

ಮಸ್ಕಿ ಪಟ್ಟಣದ ರಸ್ತೆ ದುರಂತಗಳಲ್ಲಿ ಗೋವುಗಳ ಸಾವು ಹೆಚ್ಚಾಗುತ್ತಿರುವ ಕುರಿತು ಮಾತನಾಡಿದ  ಹಿಂದೂ ಮುಖಂಡ ರಾಕೇಶ್ ಪಾಟೀಲ್, ಹೆತ್ತ ತಾಯಿಯು ಒಂದೇ ಗೋತಾಯಿಯೂ ಒಂದೇ. ಚಿಕ್ಕವರಿದ್ದಾಗ ತಾಯಿಯ ಎದೆ ಹಾಲನ್ನು ಕುಡಿದಿದ್ದೇವೆ.
ಸಾಯುವವರೆಗೂ ಗೋಮಾತೆಯ ಹಾಲನ್ನು ಕುಡಿಯುತ್ತೇವೆ. ಹಾಗಾಗಿ ಇಬ್ಬರು ನಮಗೆ ದೇವರ ಸಮಾನ. ಅಂತಹ ಕೋಟ್ಯಾನುಕೋಟಿ ದೇವತೆಗಳನ್ನು ಹೊಂದಿರುವ ಗೋ ತಾಯಿಯ ಈ ಪರಿಸ್ಥಿತಿಯನ್ನು ನಮಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಇದಕ್ಕೆ  ಸೂಕ್ತ ಪರಿಹಾರ ನೀಡುವಲ್ಲಿ ಪುರಸಭೆಯ ಮುಖ್ಯಾಧಿಕಾರಿ ವಿಫಲರಾಗಿದ್ದಾರೆ. ಗೋವುಗಳ ಸಾವಿಗೆ ತಕ್ಷಣವೆ ಕ್ರಮ ತೆಗೆದುಕೊಳ್ಳದಿದ್ದರೆ ಪುರಸಭೆ ಕಚೇರಿಗೆ  ಮುತ್ತಿಗೆ ಹಾಕಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆದರೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ಯಾವುದೇ ಕಾರ್ಯ ಇನ್ನುವರೆಗೂ ಮಾಡಿಲ್ಲ ಇದಕ್ಕೆ ಸಂಬಂಧಪಟ್ಟ ಬಿಡಾಡಿ ದನಗಳ ಮಾರಣಹೋಮ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ರಾಕೇಶ್ ಅವುಗಳನ್ನು ಸಂಸ್ಕಾರ ಮಾಡಿ ಮಾನವತೆ ಮೆರೆದಿದ್ದಾರೆ. ಮಸ್ಕಿ ಹಳ್ಳದ ಸೇತುವೆ ಮೇಲೆ ಹೆದ್ದಾರಿ ಬಸ್ಸುಗಳು ಜನಗಳ ಮೇಲೆ ಎಷ್ಟೋ ಬಾರಿ ಹೊಡೆದುಕೊಂಡು ಹೋಗಿದ್ದಾರೆ.  ಇಂತಿಷ್ಟು ಪುರಸಭೆ ಅಧಿಕಾರಿಗಳಿಗೆ ಕಾಳಜಿ ಇಲ್ಲ. ದಿನದಿಂದ ದಿನಕ್ಕೆ ಸಾಯುತ್ತಿರುವ ದನಗಳಿಗೆ ಹೊಣೆ ಯಾರು ಎಂಬಂತೆ ಗೋಮಾತೆ ದೇವರಿಗೆ ಸಮಾನ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗೋಶಾಲೆಗೆ ದನಗಳನ್ನು ಒಪ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಧರಣಿ ಹೋರಾಟ ಮಾಡುವುದಾಗಿ ಯುವ ಮುಖಂಡ ರಾಕೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು