4:47 PM Thursday4 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮುಂದುವರಿದ ಆನೆ- ಮಾನವ ಸಂಘರ್ಷ: ಕುಶಾಲನಗರ ಬಳಿ ರೈಲ್ವೆ ಬ್ಯಾರಿಕೇಡ್ ಮುರಿದ… ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಮಸ್ಕಿ ಪಟ್ಟಣದಲ್ಲಿ ಹೆಚ್ಚುತ್ತಿರುವ ಗೋವುಗಳ ಮಾರಣ ಹೋಮ: ಪುರಸಭೆ ಮುಖ್ಯಾಧಿಕಾರಿಗಳು ಘೋರ ಮೌನ

28/09/2021, 09:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕು ಕೇಂದ್ರದಲ್ಲಿ ವಾಹನ ಚಾಲಕರ ನಿರ್ಲಕ್ಷ ಹಾಗೂ ಜಾನುವಾರು ಮಾಲೀಕರ ಉಡಾಫೆತನದಿಂದ ಗೋವುಗಳನ್ನು ಸಾವು ಜಾಸ್ತಿಯಾಗುತ್ತಿದ್ದು, ನಾಗರಿಕರು ಕಳವಳ ವ್ಯಕ್ತಪಡಿಸಿದ್ದಾರೆ.

ಮಸ್ಕಿ ಪಟ್ಟಣದ ರಸ್ತೆ ದುರಂತಗಳಲ್ಲಿ ಗೋವುಗಳ ಸಾವು ಹೆಚ್ಚಾಗುತ್ತಿರುವ ಕುರಿತು ಮಾತನಾಡಿದ  ಹಿಂದೂ ಮುಖಂಡ ರಾಕೇಶ್ ಪಾಟೀಲ್, ಹೆತ್ತ ತಾಯಿಯು ಒಂದೇ ಗೋತಾಯಿಯೂ ಒಂದೇ. ಚಿಕ್ಕವರಿದ್ದಾಗ ತಾಯಿಯ ಎದೆ ಹಾಲನ್ನು ಕುಡಿದಿದ್ದೇವೆ.
ಸಾಯುವವರೆಗೂ ಗೋಮಾತೆಯ ಹಾಲನ್ನು ಕುಡಿಯುತ್ತೇವೆ. ಹಾಗಾಗಿ ಇಬ್ಬರು ನಮಗೆ ದೇವರ ಸಮಾನ. ಅಂತಹ ಕೋಟ್ಯಾನುಕೋಟಿ ದೇವತೆಗಳನ್ನು ಹೊಂದಿರುವ ಗೋ ತಾಯಿಯ ಈ ಪರಿಸ್ಥಿತಿಯನ್ನು ನಮಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಇದಕ್ಕೆ  ಸೂಕ್ತ ಪರಿಹಾರ ನೀಡುವಲ್ಲಿ ಪುರಸಭೆಯ ಮುಖ್ಯಾಧಿಕಾರಿ ವಿಫಲರಾಗಿದ್ದಾರೆ. ಗೋವುಗಳ ಸಾವಿಗೆ ತಕ್ಷಣವೆ ಕ್ರಮ ತೆಗೆದುಕೊಳ್ಳದಿದ್ದರೆ ಪುರಸಭೆ ಕಚೇರಿಗೆ  ಮುತ್ತಿಗೆ ಹಾಕಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆದರೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ಯಾವುದೇ ಕಾರ್ಯ ಇನ್ನುವರೆಗೂ ಮಾಡಿಲ್ಲ ಇದಕ್ಕೆ ಸಂಬಂಧಪಟ್ಟ ಬಿಡಾಡಿ ದನಗಳ ಮಾರಣಹೋಮ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ರಾಕೇಶ್ ಅವುಗಳನ್ನು ಸಂಸ್ಕಾರ ಮಾಡಿ ಮಾನವತೆ ಮೆರೆದಿದ್ದಾರೆ. ಮಸ್ಕಿ ಹಳ್ಳದ ಸೇತುವೆ ಮೇಲೆ ಹೆದ್ದಾರಿ ಬಸ್ಸುಗಳು ಜನಗಳ ಮೇಲೆ ಎಷ್ಟೋ ಬಾರಿ ಹೊಡೆದುಕೊಂಡು ಹೋಗಿದ್ದಾರೆ.  ಇಂತಿಷ್ಟು ಪುರಸಭೆ ಅಧಿಕಾರಿಗಳಿಗೆ ಕಾಳಜಿ ಇಲ್ಲ. ದಿನದಿಂದ ದಿನಕ್ಕೆ ಸಾಯುತ್ತಿರುವ ದನಗಳಿಗೆ ಹೊಣೆ ಯಾರು ಎಂಬಂತೆ ಗೋಮಾತೆ ದೇವರಿಗೆ ಸಮಾನ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗೋಶಾಲೆಗೆ ದನಗಳನ್ನು ಒಪ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಧರಣಿ ಹೋರಾಟ ಮಾಡುವುದಾಗಿ ಯುವ ಮುಖಂಡ ರಾಕೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು