12:09 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಮಸ್ಕಿ ಪಟ್ಟಣದಲ್ಲಿ ಹೆಚ್ಚುತ್ತಿರುವ ಗೋವುಗಳ ಮಾರಣ ಹೋಮ: ಪುರಸಭೆ ಮುಖ್ಯಾಧಿಕಾರಿಗಳು ಘೋರ ಮೌನ

28/09/2021, 09:20

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮಸ್ಕಿ ತಾಲೂಕು ಕೇಂದ್ರದಲ್ಲಿ ವಾಹನ ಚಾಲಕರ ನಿರ್ಲಕ್ಷ ಹಾಗೂ ಜಾನುವಾರು ಮಾಲೀಕರ ಉಡಾಫೆತನದಿಂದ ಗೋವುಗಳನ್ನು ಸಾವು ಜಾಸ್ತಿಯಾಗುತ್ತಿದ್ದು, ನಾಗರಿಕರು ಕಳವಳ ವ್ಯಕ್ತಪಡಿಸಿದ್ದಾರೆ.

ಮಸ್ಕಿ ಪಟ್ಟಣದ ರಸ್ತೆ ದುರಂತಗಳಲ್ಲಿ ಗೋವುಗಳ ಸಾವು ಹೆಚ್ಚಾಗುತ್ತಿರುವ ಕುರಿತು ಮಾತನಾಡಿದ  ಹಿಂದೂ ಮುಖಂಡ ರಾಕೇಶ್ ಪಾಟೀಲ್, ಹೆತ್ತ ತಾಯಿಯು ಒಂದೇ ಗೋತಾಯಿಯೂ ಒಂದೇ. ಚಿಕ್ಕವರಿದ್ದಾಗ ತಾಯಿಯ ಎದೆ ಹಾಲನ್ನು ಕುಡಿದಿದ್ದೇವೆ.
ಸಾಯುವವರೆಗೂ ಗೋಮಾತೆಯ ಹಾಲನ್ನು ಕುಡಿಯುತ್ತೇವೆ. ಹಾಗಾಗಿ ಇಬ್ಬರು ನಮಗೆ ದೇವರ ಸಮಾನ. ಅಂತಹ ಕೋಟ್ಯಾನುಕೋಟಿ ದೇವತೆಗಳನ್ನು ಹೊಂದಿರುವ ಗೋ ತಾಯಿಯ ಈ ಪರಿಸ್ಥಿತಿಯನ್ನು ನಮಗೆ ಸಹಿಸಿಕೊಳ್ಳಲಾಗುತ್ತಿಲ್ಲ. ಇದಕ್ಕೆ  ಸೂಕ್ತ ಪರಿಹಾರ ನೀಡುವಲ್ಲಿ ಪುರಸಭೆಯ ಮುಖ್ಯಾಧಿಕಾರಿ ವಿಫಲರಾಗಿದ್ದಾರೆ. ಗೋವುಗಳ ಸಾವಿಗೆ ತಕ್ಷಣವೆ ಕ್ರಮ ತೆಗೆದುಕೊಳ್ಳದಿದ್ದರೆ ಪುರಸಭೆ ಕಚೇರಿಗೆ  ಮುತ್ತಿಗೆ ಹಾಕಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಆದರೆ ಮುಖ್ಯಧಿಕಾರಿ ಹನುಮಂತಮ್ಮ ನಾಯಕ್ ಯಾವುದೇ ಕಾರ್ಯ ಇನ್ನುವರೆಗೂ ಮಾಡಿಲ್ಲ ಇದಕ್ಕೆ ಸಂಬಂಧಪಟ್ಟ ಬಿಡಾಡಿ ದನಗಳ ಮಾರಣಹೋಮ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ರಾಕೇಶ್ ಅವುಗಳನ್ನು ಸಂಸ್ಕಾರ ಮಾಡಿ ಮಾನವತೆ ಮೆರೆದಿದ್ದಾರೆ. ಮಸ್ಕಿ ಹಳ್ಳದ ಸೇತುವೆ ಮೇಲೆ ಹೆದ್ದಾರಿ ಬಸ್ಸುಗಳು ಜನಗಳ ಮೇಲೆ ಎಷ್ಟೋ ಬಾರಿ ಹೊಡೆದುಕೊಂಡು ಹೋಗಿದ್ದಾರೆ.  ಇಂತಿಷ್ಟು ಪುರಸಭೆ ಅಧಿಕಾರಿಗಳಿಗೆ ಕಾಳಜಿ ಇಲ್ಲ. ದಿನದಿಂದ ದಿನಕ್ಕೆ ಸಾಯುತ್ತಿರುವ ದನಗಳಿಗೆ ಹೊಣೆ ಯಾರು ಎಂಬಂತೆ ಗೋಮಾತೆ ದೇವರಿಗೆ ಸಮಾನ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಗೋಶಾಲೆಗೆ ದನಗಳನ್ನು ಒಪ್ಪಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಧರಣಿ ಹೋರಾಟ ಮಾಡುವುದಾಗಿ ಯುವ ಮುಖಂಡ ರಾಕೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು