3:39 PM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ

05/07/2021, 07:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿ ತಾಲೂಕಿನ ಹಾಲಾಪೂರದ ರೈತ ಸಂಪರ್ಕ ಕೇಂದ್ರದಲ್ಲಿ 2021-22 ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ ಮತ್ತು ಕೀಲು ಚೀಲಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಾಲಾಪೂರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಮರೇಗೌಡ ಪಾಟೀಲ್  ಮಾತನಾಡಿ, ಇಂದು ಸರಕಾರ ಅನೇಕ ರೈತ ಪರ ಯೋಜನೆಗಳನ್ನು ಹಮ್ಮಿಕೊಂಡಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ರೈತರು ಬೆಳೆ ವಿಮಾ ತುಂಬುವ ಸಂದರ್ಭದಲ್ಲಿ ಸರಿಯಾದ ಬೆಳೆಯನ್ನು ನಮೊದಿಸಬೇಕು. ರೈತ ಬೆಳೆದಿರುವ ಬೆಳೆ ಬೇರೆ ಇರುತ್ತದೆ. ಆದರೆ ಆನ್ ಲೈನ್ ಬೇರೆ ಬೆಳೆಯ ಬಗ್ಗೆ ನಮೂದಿಸುತ್ತೀರಿ. ಇದರಿಂದ ನಮಗೆ ತೊಂದರೆ ಆಗುತ್ತದೆ. ಅದಕ್ಕಾಗಿ ಸರಿಯಾಗಿ ವಿಮೆಯನ್ನು ತುಂಬಬೇಕು. ಹಾಗೆ ಗೊಬ್ಬರವನ್ನು ಹಾಕುವಾಗ ಸರಿಯಾಗಿ ಹಾಕಬೇಕು. ಹೆಚ್ಚುಕಡಿಮೆ ಹಾಕುವುದರಿಂದ ಬೆಳೆ ಸರಿಯಾಗಿ ಬರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ನಮ್ಮ ಕೇಂದ್ರಕ್ಕೆ ಬನ್ನಿ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಗ್ರಾಮದ ಮುಖಂಡರಾದ ಜಗದೀಶಸ್ವಾಮಿ , ಅಮರೇಗೌಡ, ಬಸವರಾಜ ವಡಗೇರಿ, ವೆಂಕಟರಡ್ಡಿ , ಕರಿಯಪ್ಪ , ಸಹಾಯಕ ಕೃಷಿ ಅದಿಕಾರಿ ಸದ್ದಾಂ ಹುಸೇನ್ , ತಾಹೀರಬೇಗಂ, ಉಪನ್ಯಾಸಕರಾದ ನಾಗೇಶ, ಸಿದ್ದಾರ್ಥ ಪಾಟೀಲ್, ಶ್ರೀಕಾಂತ್ ,  ಸಿಬ್ಬಂದಿಗಳಾದ ಪ್ರವೀಣ್ಕುಮಾರ, ಮಂಜುನಾಥ , ಮುದುಕಪ್ಪ , ಹೋಬಳಿ ಕೇಂದ್ರದ ರೈತ ಬಾಂಧವರು ಕಾರ್ಯಕ್ರಮದಲ್ಲಿ ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು