3:20 AM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ

05/07/2021, 07:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿ ತಾಲೂಕಿನ ಹಾಲಾಪೂರದ ರೈತ ಸಂಪರ್ಕ ಕೇಂದ್ರದಲ್ಲಿ 2021-22 ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ ಮತ್ತು ಕೀಲು ಚೀಲಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಾಲಾಪೂರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಮರೇಗೌಡ ಪಾಟೀಲ್  ಮಾತನಾಡಿ, ಇಂದು ಸರಕಾರ ಅನೇಕ ರೈತ ಪರ ಯೋಜನೆಗಳನ್ನು ಹಮ್ಮಿಕೊಂಡಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ರೈತರು ಬೆಳೆ ವಿಮಾ ತುಂಬುವ ಸಂದರ್ಭದಲ್ಲಿ ಸರಿಯಾದ ಬೆಳೆಯನ್ನು ನಮೊದಿಸಬೇಕು. ರೈತ ಬೆಳೆದಿರುವ ಬೆಳೆ ಬೇರೆ ಇರುತ್ತದೆ. ಆದರೆ ಆನ್ ಲೈನ್ ಬೇರೆ ಬೆಳೆಯ ಬಗ್ಗೆ ನಮೂದಿಸುತ್ತೀರಿ. ಇದರಿಂದ ನಮಗೆ ತೊಂದರೆ ಆಗುತ್ತದೆ. ಅದಕ್ಕಾಗಿ ಸರಿಯಾಗಿ ವಿಮೆಯನ್ನು ತುಂಬಬೇಕು. ಹಾಗೆ ಗೊಬ್ಬರವನ್ನು ಹಾಕುವಾಗ ಸರಿಯಾಗಿ ಹಾಕಬೇಕು. ಹೆಚ್ಚುಕಡಿಮೆ ಹಾಕುವುದರಿಂದ ಬೆಳೆ ಸರಿಯಾಗಿ ಬರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ನಮ್ಮ ಕೇಂದ್ರಕ್ಕೆ ಬನ್ನಿ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಗ್ರಾಮದ ಮುಖಂಡರಾದ ಜಗದೀಶಸ್ವಾಮಿ , ಅಮರೇಗೌಡ, ಬಸವರಾಜ ವಡಗೇರಿ, ವೆಂಕಟರಡ್ಡಿ , ಕರಿಯಪ್ಪ , ಸಹಾಯಕ ಕೃಷಿ ಅದಿಕಾರಿ ಸದ್ದಾಂ ಹುಸೇನ್ , ತಾಹೀರಬೇಗಂ, ಉಪನ್ಯಾಸಕರಾದ ನಾಗೇಶ, ಸಿದ್ದಾರ್ಥ ಪಾಟೀಲ್, ಶ್ರೀಕಾಂತ್ ,  ಸಿಬ್ಬಂದಿಗಳಾದ ಪ್ರವೀಣ್ಕುಮಾರ, ಮಂಜುನಾಥ , ಮುದುಕಪ್ಪ , ಹೋಬಳಿ ಕೇಂದ್ರದ ರೈತ ಬಾಂಧವರು ಕಾರ್ಯಕ್ರಮದಲ್ಲಿ ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು