5:35 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ

05/07/2021, 07:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ 

info.reporterkarnataka@gmail.com

ಮಸ್ಕಿ ತಾಲೂಕಿನ ಹಾಲಾಪೂರದ ರೈತ ಸಂಪರ್ಕ ಕೇಂದ್ರದಲ್ಲಿ 2021-22 ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿಯಲ್ಲಿ ತೊಗರಿ ಪ್ರಾತ್ಯಕ್ಷಿಕೆ ಮತ್ತು ಕೀಲು ಚೀಲಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಾಲಾಪೂರ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಅಮರೇಗೌಡ ಪಾಟೀಲ್  ಮಾತನಾಡಿ, ಇಂದು ಸರಕಾರ ಅನೇಕ ರೈತ ಪರ ಯೋಜನೆಗಳನ್ನು ಹಮ್ಮಿಕೊಂಡಿದೆ. ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ರೈತರು ಬೆಳೆ ವಿಮಾ ತುಂಬುವ ಸಂದರ್ಭದಲ್ಲಿ ಸರಿಯಾದ ಬೆಳೆಯನ್ನು ನಮೊದಿಸಬೇಕು. ರೈತ ಬೆಳೆದಿರುವ ಬೆಳೆ ಬೇರೆ ಇರುತ್ತದೆ. ಆದರೆ ಆನ್ ಲೈನ್ ಬೇರೆ ಬೆಳೆಯ ಬಗ್ಗೆ ನಮೂದಿಸುತ್ತೀರಿ. ಇದರಿಂದ ನಮಗೆ ತೊಂದರೆ ಆಗುತ್ತದೆ. ಅದಕ್ಕಾಗಿ ಸರಿಯಾಗಿ ವಿಮೆಯನ್ನು ತುಂಬಬೇಕು. ಹಾಗೆ ಗೊಬ್ಬರವನ್ನು ಹಾಕುವಾಗ ಸರಿಯಾಗಿ ಹಾಕಬೇಕು. ಹೆಚ್ಚುಕಡಿಮೆ ಹಾಕುವುದರಿಂದ ಬೆಳೆ ಸರಿಯಾಗಿ ಬರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ನಮ್ಮ ಕೇಂದ್ರಕ್ಕೆ ಬನ್ನಿ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಗ್ರಾಮದ ಮುಖಂಡರಾದ ಜಗದೀಶಸ್ವಾಮಿ , ಅಮರೇಗೌಡ, ಬಸವರಾಜ ವಡಗೇರಿ, ವೆಂಕಟರಡ್ಡಿ , ಕರಿಯಪ್ಪ , ಸಹಾಯಕ ಕೃಷಿ ಅದಿಕಾರಿ ಸದ್ದಾಂ ಹುಸೇನ್ , ತಾಹೀರಬೇಗಂ, ಉಪನ್ಯಾಸಕರಾದ ನಾಗೇಶ, ಸಿದ್ದಾರ್ಥ ಪಾಟೀಲ್, ಶ್ರೀಕಾಂತ್ ,  ಸಿಬ್ಬಂದಿಗಳಾದ ಪ್ರವೀಣ್ಕುಮಾರ, ಮಂಜುನಾಥ , ಮುದುಕಪ್ಪ , ಹೋಬಳಿ ಕೇಂದ್ರದ ರೈತ ಬಾಂಧವರು ಕಾರ್ಯಕ್ರಮದಲ್ಲಿ ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು