10:51 PM Tuesday27 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಮಸ್ಕಿ: ಸತತ ಮಳೆಗೆ ನಾಶವಾದ ರೈತರ ಬೆಳೆಗೆ ಪರಿಹಾರ ನೀಡಲು ಸರಕಾರಕ್ಕೆ ಯುವ ಕಾಂಗ್ರೆಸ್ ಮನವಿ

20/11/2021, 20:54

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕಳೆದ ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು ರೈತರು ಬೆಳೆದ ಬೆಳೆಗಳು ನಾಶವಾಗಿವೆ. ರೈತರಿಗೆ ಕೂಡಲೇ ರಾಜ್ಯ ಸರ್ಕಾರ ಹೆಕ್ಟರ್ ಗೆ 30 ಸಾವಿರ ರೂ. ಪರಿಹಾರ ಘೋಷಣೆ ಮಾಡಬೇಕು ಹಾಗೂ ರೈತ ಬೆಳೆದ ಭತ್ತಕ್ಕೆ ಕ್ವಿಂಟಾಲ್ ಗೆ 2 ಸಾವಿರ ರೂ. ಬೆಂಬಲ ಬೆಲೆ ತಕ್ಷಣವೇ ಘೋಷಣೆ  ಮಾಡಬೇಕೆಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ್ ಬಾಗೋಡಿ ಹಾಗೂ ಕಿಸಾನ್ ಘಟಕದ ಅಧ್ಯಕ್ಷ ಮೈಬೂಬ್ ಸಾಬ್ ಮುದ್ದಾಪುರ್ ಒತ್ತಾಯಿಸಿದರು.

ಮಸ್ಕಿ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲೇ ಪರಿಹಾರ ಕೊಡದಿದ್ದಲ್ಲಿ ಮಸ್ಕಿ ತಾಲೂಕಿನಾದ್ಯಂತ ಉಗ್ರ ಹೋರಾಟ ಮಾಡಲಾಗುವುದು  ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಲನಗೌಡ ಸುಂಕನೂರ್,ಮಹಾಂತೇಶ್ ಮಲ್ಲನಗೌಡ ಗೋನಾಲ್,ಅಲಂಬಾಶ ಗೋನಾಳ,ಆನಂದ್ ಜೋಗಿ,ಚಂದಪಾಶ ಮಸ್ಕಿ,ಕೃಷ್ಣ ಚಿಗರಿ,ಮಾಳಿಂಗ ಕಡಬೂರ್,ದುರ್ಗಪ್ಪ ಇನ್ನಿತರರು ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು