6:48 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಸ್ಕಿ: ಸತತ ಮಳೆಗೆ ನಾಶವಾದ ರೈತರ ಬೆಳೆಗೆ ಪರಿಹಾರ ನೀಡಲು ಸರಕಾರಕ್ಕೆ ಯುವ ಕಾಂಗ್ರೆಸ್ ಮನವಿ

20/11/2021, 20:54

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಕಳೆದ ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು ರೈತರು ಬೆಳೆದ ಬೆಳೆಗಳು ನಾಶವಾಗಿವೆ. ರೈತರಿಗೆ ಕೂಡಲೇ ರಾಜ್ಯ ಸರ್ಕಾರ ಹೆಕ್ಟರ್ ಗೆ 30 ಸಾವಿರ ರೂ. ಪರಿಹಾರ ಘೋಷಣೆ ಮಾಡಬೇಕು ಹಾಗೂ ರೈತ ಬೆಳೆದ ಭತ್ತಕ್ಕೆ ಕ್ವಿಂಟಾಲ್ ಗೆ 2 ಸಾವಿರ ರೂ. ಬೆಂಬಲ ಬೆಲೆ ತಕ್ಷಣವೇ ಘೋಷಣೆ  ಮಾಡಬೇಕೆಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ್ ಬಾಗೋಡಿ ಹಾಗೂ ಕಿಸಾನ್ ಘಟಕದ ಅಧ್ಯಕ್ಷ ಮೈಬೂಬ್ ಸಾಬ್ ಮುದ್ದಾಪುರ್ ಒತ್ತಾಯಿಸಿದರು.

ಮಸ್ಕಿ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೂಡಲೇ ಪರಿಹಾರ ಕೊಡದಿದ್ದಲ್ಲಿ ಮಸ್ಕಿ ತಾಲೂಕಿನಾದ್ಯಂತ ಉಗ್ರ ಹೋರಾಟ ಮಾಡಲಾಗುವುದು  ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಲನಗೌಡ ಸುಂಕನೂರ್,ಮಹಾಂತೇಶ್ ಮಲ್ಲನಗೌಡ ಗೋನಾಲ್,ಅಲಂಬಾಶ ಗೋನಾಳ,ಆನಂದ್ ಜೋಗಿ,ಚಂದಪಾಶ ಮಸ್ಕಿ,ಕೃಷ್ಣ ಚಿಗರಿ,ಮಾಳಿಂಗ ಕಡಬೂರ್,ದುರ್ಗಪ್ಪ ಇನ್ನಿತರರು ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು