12:37 AM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಮಸ್ಕಿ: ಸತ್ಯಧ್ವನಿ ಪತ್ರಿಕೆ 4ನೇ ವರ್ಷದ ವಿಶೇಷಾಂಕ ಅನಾವರಣ; ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಶುಭ ಹಾರೈಕೆ

28/11/2021, 09:35

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು

info.reporterkarnataka@gmail.com 

ಪ್ರಜಾಪ್ರಭುತ್ವದ ನಾಲ್ಕನೆಯ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೆಯಾದ ಇತಿಹಾಸವಿದೆ. ಸಮಾಜದಲ್ಲಿ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಪತ್ರಿಕೆಗಳು  ಮಾಡುತ್ತಿವೆ. ಸಮಾಜದಲ್ಲಿ ಪತ್ರಿಕಾರಂಗಕ್ಕೆ ದೊಡ್ಡ ಗೌರವ ಇದೆ ಮತ್ತು ಪತ್ರಿಕೆಯು ನೊಂದವರ ಧ್ವನಿಯಾಗಬೇಕು ಎಂದು ಮಸ್ಕಿಯ ಶ್ರೀ ಷಟಸ್ಥಲ ಬ್ರಹ್ಮ ವರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.


ಅವರು ಅಂತರಗಂಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಸಾರಥ್ಯದಲ್ಲಿ ಮೂಡಿಬರುವ ಸತ್ಯಧ್ವನಿ ಪತ್ರಿಕೆ 4ನೇ ವರ್ಷದ ವಿಶೇಷಾಂಕ ಅನಾವರಣಗೊಳಿಸಿ ಮಾತನಾಡಿದರು.

ಸಮಾಜ ಮೆಚ್ಚುವಂತಹ ಸತ್ಯ ಅಂಶಗಳ ಸುದ್ದಿಗಳು ಪತ್ರಿಕೆಯಿಂದ ಹೊರ ಬಂದಾಗ ಪತ್ರಿಕೆಗೆ ಗೌರವ ಸಿಗುತ್ತದೆ. ಅಂತಹ ನಿಟ್ಟಿನಲ್ಲಿ ಅಂತರಗಂಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಸಾರಥ್ಯದಲ್ಲಿ ಮೂಡಿಬರುವ ಸತ್ಯ ಧ್ವನಿ ಪತ್ರಿಕೆ ಕೆಲಸ ಮಾಡುತ್ತಿದೆ. ಸಾಲಿಮಠ ಅವರಿಂದ ಒಳ್ಳೆಯ ಸುದ್ದಿಗಳು ಸಮಾಜದಲ್ಲಿ ಬಿತ್ತರವಾಗಲಿ. ಸಮಾಜದಲ್ಲಿ ಒಳ್ಳೆಯ ಹೆಸರು ಪಡೆದುಕೊಳ್ಳಲಿ ಎಂದು ಹಾರೈಸಿದರು.

ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸ್ವಾಮಿ ಸತ್ಯ ಮಠ ಮಾತನಾಡಿ, ನಮ್ಮ ಸಮಾಜದ ಪತ್ರಿಕೆಯ ಸಂಪಾದಕರಿಗೆ ಶುಭವಾಗಲಿ. ಸಮಾಜ ಮೆಚ್ಚುವಂತ ವರದಿಗಳು ಸತ್ಯ ಧ್ವನಿ ದಿನಪತ್ರಿಕೆಯಿಂದ ಹೊರಬರಲಿ ಎಂದರು.

ಸಮಾಜ ಹಾಗೂ ಪತ್ರಿಕೆಯ ಪರವಾಗಿ ಗಣ ಮಠದಯ್ಯ ಸ್ವಾಮಿ ಸಾಲಿಮಠ ಮಾತನಾಡಿ,ಪತ್ರಿಕಾರಂಗವೂ ತನ್ನದೆಯಾದ ಇತಿಹಾಸವನ್ನು ಒಳಗೊಂಡಿದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೆಗಳಲ್ಲಿ ನಿಖರ ಮತ್ತು ನೈಜ ಸುದ್ದಿಗಳು ಮೂಡಿದಾಗ ಸಮಾಜದಲ್ಲಿ ಪತ್ರಿಕೆಗಳಿಗೆ ಒಳ್ಳೆಯ ಹೆಸರು ಬರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಂಗಮ ಸಮಾಜ ಯುವ ಮುಖಂಡರು, ಸದಸ್ಯರು, ವೀರಶೈವ ಧರ್ಮದ ಮಸ್ಕಿಯ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು