5:26 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ಮಸ್ಕಿ: ಸತ್ಯಧ್ವನಿ ಪತ್ರಿಕೆ 4ನೇ ವರ್ಷದ ವಿಶೇಷಾಂಕ ಅನಾವರಣ; ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಶುಭ ಹಾರೈಕೆ

28/11/2021, 09:35

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು

info.reporterkarnataka@gmail.com 

ಪ್ರಜಾಪ್ರಭುತ್ವದ ನಾಲ್ಕನೆಯ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೆಯಾದ ಇತಿಹಾಸವಿದೆ. ಸಮಾಜದಲ್ಲಿ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಪತ್ರಿಕೆಗಳು  ಮಾಡುತ್ತಿವೆ. ಸಮಾಜದಲ್ಲಿ ಪತ್ರಿಕಾರಂಗಕ್ಕೆ ದೊಡ್ಡ ಗೌರವ ಇದೆ ಮತ್ತು ಪತ್ರಿಕೆಯು ನೊಂದವರ ಧ್ವನಿಯಾಗಬೇಕು ಎಂದು ಮಸ್ಕಿಯ ಶ್ರೀ ಷಟಸ್ಥಲ ಬ್ರಹ್ಮ ವರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.


ಅವರು ಅಂತರಗಂಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಸಾರಥ್ಯದಲ್ಲಿ ಮೂಡಿಬರುವ ಸತ್ಯಧ್ವನಿ ಪತ್ರಿಕೆ 4ನೇ ವರ್ಷದ ವಿಶೇಷಾಂಕ ಅನಾವರಣಗೊಳಿಸಿ ಮಾತನಾಡಿದರು.

ಸಮಾಜ ಮೆಚ್ಚುವಂತಹ ಸತ್ಯ ಅಂಶಗಳ ಸುದ್ದಿಗಳು ಪತ್ರಿಕೆಯಿಂದ ಹೊರ ಬಂದಾಗ ಪತ್ರಿಕೆಗೆ ಗೌರವ ಸಿಗುತ್ತದೆ. ಅಂತಹ ನಿಟ್ಟಿನಲ್ಲಿ ಅಂತರಗಂಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಸಾರಥ್ಯದಲ್ಲಿ ಮೂಡಿಬರುವ ಸತ್ಯ ಧ್ವನಿ ಪತ್ರಿಕೆ ಕೆಲಸ ಮಾಡುತ್ತಿದೆ. ಸಾಲಿಮಠ ಅವರಿಂದ ಒಳ್ಳೆಯ ಸುದ್ದಿಗಳು ಸಮಾಜದಲ್ಲಿ ಬಿತ್ತರವಾಗಲಿ. ಸಮಾಜದಲ್ಲಿ ಒಳ್ಳೆಯ ಹೆಸರು ಪಡೆದುಕೊಳ್ಳಲಿ ಎಂದು ಹಾರೈಸಿದರು.

ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸ್ವಾಮಿ ಸತ್ಯ ಮಠ ಮಾತನಾಡಿ, ನಮ್ಮ ಸಮಾಜದ ಪತ್ರಿಕೆಯ ಸಂಪಾದಕರಿಗೆ ಶುಭವಾಗಲಿ. ಸಮಾಜ ಮೆಚ್ಚುವಂತ ವರದಿಗಳು ಸತ್ಯ ಧ್ವನಿ ದಿನಪತ್ರಿಕೆಯಿಂದ ಹೊರಬರಲಿ ಎಂದರು.

ಸಮಾಜ ಹಾಗೂ ಪತ್ರಿಕೆಯ ಪರವಾಗಿ ಗಣ ಮಠದಯ್ಯ ಸ್ವಾಮಿ ಸಾಲಿಮಠ ಮಾತನಾಡಿ,ಪತ್ರಿಕಾರಂಗವೂ ತನ್ನದೆಯಾದ ಇತಿಹಾಸವನ್ನು ಒಳಗೊಂಡಿದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೆಗಳಲ್ಲಿ ನಿಖರ ಮತ್ತು ನೈಜ ಸುದ್ದಿಗಳು ಮೂಡಿದಾಗ ಸಮಾಜದಲ್ಲಿ ಪತ್ರಿಕೆಗಳಿಗೆ ಒಳ್ಳೆಯ ಹೆಸರು ಬರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಂಗಮ ಸಮಾಜ ಯುವ ಮುಖಂಡರು, ಸದಸ್ಯರು, ವೀರಶೈವ ಧರ್ಮದ ಮಸ್ಕಿಯ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು