4:42 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಸ್ಕಿ: ಸತ್ಯಧ್ವನಿ ಪತ್ರಿಕೆ 4ನೇ ವರ್ಷದ ವಿಶೇಷಾಂಕ ಅನಾವರಣ; ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಶುಭ ಹಾರೈಕೆ

28/11/2021, 09:35

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ ರಾಯಚೂರು

info.reporterkarnataka@gmail.com 

ಪ್ರಜಾಪ್ರಭುತ್ವದ ನಾಲ್ಕನೆಯ ಅಂಗವಾದ ಪತ್ರಿಕಾ ರಂಗಕ್ಕೆ ತನ್ನದೆಯಾದ ಇತಿಹಾಸವಿದೆ. ಸಮಾಜದಲ್ಲಿ ಅಂಕುಡೊಂಕುಗಳನ್ನು ತಿದ್ದುವ ಕೆಲಸವನ್ನು ಪತ್ರಿಕೆಗಳು  ಮಾಡುತ್ತಿವೆ. ಸಮಾಜದಲ್ಲಿ ಪತ್ರಿಕಾರಂಗಕ್ಕೆ ದೊಡ್ಡ ಗೌರವ ಇದೆ ಮತ್ತು ಪತ್ರಿಕೆಯು ನೊಂದವರ ಧ್ವನಿಯಾಗಬೇಕು ಎಂದು ಮಸ್ಕಿಯ ಶ್ರೀ ಷಟಸ್ಥಲ ಬ್ರಹ್ಮ ವರ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.


ಅವರು ಅಂತರಗಂಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಸಾರಥ್ಯದಲ್ಲಿ ಮೂಡಿಬರುವ ಸತ್ಯಧ್ವನಿ ಪತ್ರಿಕೆ 4ನೇ ವರ್ಷದ ವಿಶೇಷಾಂಕ ಅನಾವರಣಗೊಳಿಸಿ ಮಾತನಾಡಿದರು.

ಸಮಾಜ ಮೆಚ್ಚುವಂತಹ ಸತ್ಯ ಅಂಶಗಳ ಸುದ್ದಿಗಳು ಪತ್ರಿಕೆಯಿಂದ ಹೊರ ಬಂದಾಗ ಪತ್ರಿಕೆಗೆ ಗೌರವ ಸಿಗುತ್ತದೆ. ಅಂತಹ ನಿಟ್ಟಿನಲ್ಲಿ ಅಂತರಗಂಗೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ್ ಸಾರಥ್ಯದಲ್ಲಿ ಮೂಡಿಬರುವ ಸತ್ಯ ಧ್ವನಿ ಪತ್ರಿಕೆ ಕೆಲಸ ಮಾಡುತ್ತಿದೆ. ಸಾಲಿಮಠ ಅವರಿಂದ ಒಳ್ಳೆಯ ಸುದ್ದಿಗಳು ಸಮಾಜದಲ್ಲಿ ಬಿತ್ತರವಾಗಲಿ. ಸಮಾಜದಲ್ಲಿ ಒಳ್ಳೆಯ ಹೆಸರು ಪಡೆದುಕೊಳ್ಳಲಿ ಎಂದು ಹಾರೈಸಿದರು.

ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸ್ವಾಮಿ ಸತ್ಯ ಮಠ ಮಾತನಾಡಿ, ನಮ್ಮ ಸಮಾಜದ ಪತ್ರಿಕೆಯ ಸಂಪಾದಕರಿಗೆ ಶುಭವಾಗಲಿ. ಸಮಾಜ ಮೆಚ್ಚುವಂತ ವರದಿಗಳು ಸತ್ಯ ಧ್ವನಿ ದಿನಪತ್ರಿಕೆಯಿಂದ ಹೊರಬರಲಿ ಎಂದರು.

ಸಮಾಜ ಹಾಗೂ ಪತ್ರಿಕೆಯ ಪರವಾಗಿ ಗಣ ಮಠದಯ್ಯ ಸ್ವಾಮಿ ಸಾಲಿಮಠ ಮಾತನಾಡಿ,ಪತ್ರಿಕಾರಂಗವೂ ತನ್ನದೆಯಾದ ಇತಿಹಾಸವನ್ನು ಒಳಗೊಂಡಿದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕೆಗಳಲ್ಲಿ ನಿಖರ ಮತ್ತು ನೈಜ ಸುದ್ದಿಗಳು ಮೂಡಿದಾಗ ಸಮಾಜದಲ್ಲಿ ಪತ್ರಿಕೆಗಳಿಗೆ ಒಳ್ಳೆಯ ಹೆಸರು ಬರುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಂಗಮ ಸಮಾಜ ಯುವ ಮುಖಂಡರು, ಸದಸ್ಯರು, ವೀರಶೈವ ಧರ್ಮದ ಮಸ್ಕಿಯ ಮುಖಂಡರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು