7:02 AM Sunday15 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಮಸ್ಕಿ ಸಿರಿವಾರ ಪಟ್ಟಣದಲ್ಲಿ ಬಿಜೆಪಿ ಜನ ಸ್ವರಾಜ್ ಸಮಾವೇಶ: ಕೇಂದ್ರ- ರಾಜ್ಯ ಸಚಿವರು ಭಾಗಿ

17/11/2021, 20:40

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಜನ ಸ್ವರಾಜ್ ಸಮಾವೇಶವು ರಾಜ್ಯದಲ್ಲಿ 4 ತಂಡಗಳಾಗಿ ನಡೆಯಲಿದ್ದು, 1ನೇ ತಂಡದಲ್ಲಿ ಸಮಾವೇಶಕ್ಕೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಭಗವಂತ್ ಖೂಬಾ ಜಿ ರಾಜ್ಯ ಸಚಿವರಾದ ,ಅರಗ ಜ್ಞಾನೇಂದ್ರ,ವಿ. ಸೋಮಣ್ಣ , ಮುರುಗೇಶ್ ನಿರಾಣಿ  ಮತ್ತು ಶಾಸಕರುಗಳಾದ ರಾಜೇಗೌಡ, ಎನ್. ಮಹೇಶ್ ರಾಜ್ಯ ಬಿಜೆಪಿ ಉಪಾಧ್ಯಕ್ಷ ಗಳಾದ ಮಾಲೀಕಯ್ಯ ಗುತ್ತೇದಾರ್ ಪ್ರತಾಪ್ ಸಿಂಹ ಈ ಜಿಲ್ಲೆಯ ಸಂಸದರು, ಶಾಸಕರು ಮಾಜಿ ಶಾಸಕರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದರು.

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಜನ ಸ್ವರಾಜ್ ರಾಜ್ಯ ಸಮಾವೇಶ ಯಾತ್ರೆಯ ಕುರಿತಾಗಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಶುಭಾಶಯಗಳನ್ನು ವಿಧಾನ ಪರಿಷತ್ ಚುನಾವಣೆಯ ಜನ ಸುರಾಜ್ ಸಮಾವೇಶದ ಕುರುತಾಗಿ  ನಾಯಕರಾದ ಪ್ರತಾಪಗೌಡ ಪಾಟೀಲ್ ಮಾಜಿ ಶಾಸಕರು ಪತ್ರಕರ್ತರು ಜೊತೆ ಸಮಾವೇಶವು ಸಿರಿವಾರ ಪಟ್ಟಣದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಹಾಗೂ ಜಿಲ್ಲಾ ಬಿಜೆಪಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಾಣೇಶ ದೇಶಪಾಂಡೆ, ಜಿಲ್ಲಾ ಉಪಾಧ್ಯಕ್ಷರಾದ ಅಪ್ಪಾಜಿ ಗೌಡ ಪಾಟೀಲ್ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ ಮಲ್ಲಿಕಾರ್ಜುನ ಯಾದವ್ ಮತ್ತು ಸಂಗಮೇಶ ಹತ್ತಿಗುಡ್ಡ ಪತ್ರಿಕಾಗೋಷ್ಠಿಯಲ್ಲಿ  ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು