6:44 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಮಸ್ಕಿ ಕ್ಷೇತ್ರದ ಬೆಳ್ಳಿಗನೂರು ಗ್ರಾಮದಲ್ಲಿ ತಡೆಗೋಡೆ  ಇಲ್ಲದ ನೂತನ ಸೇತುವೆ: ಅಪಾಯಕ್ಕೆ ಭಾರಿ ಆಹ್ವಾನ

10/10/2021, 11:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಬೆಳ್ಳಿಗನೂರು ಗ್ರಾಮದಲ್ಲಿ ಉಟಕನೂರು ಹೋಗುವ ರಸ್ತೆಗೆ ನೂತವಾಗಿ ನಿರ್ಮಿಸಿದ ಸೇತುವೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಪಕ್ಕದಲ್ಲೇ ಶಾಲೆ ಇರುವ ಈ ಸೇತುವೆಗೆ ತಡೆಗೋಡೆ ಅಥವಾ ಗಾರ್ಡ್ ನಿರ್ಮಿಸದೇ ಇರುವುದೇ ಡೇಂಜರ್ ಸನ್ನಿವೇಶವನ್ನು ಸೃಷ್ಟಿಸಿದೆ.


ನೂತನ ಸೇತುವೆಯ ಕಾಮಗಾರಿ ಮುಗಿದು ಬಿಲ್ ಪಾವತಿಯೂ ನಡೆದಿದ್ದರೂ ಸೇತುವೆಗೆ ತಡೆಗೋಡೆ ಮಾತ್ರ ನಿರ್ಮಿಸಿಲ್ಲ. ಇಲ್ಲೇ ಪಕ್ಕದಲ್ಲಿ ಸರಕಾರಿ ಶಾಲೆ ಇದ್ದು, ನೂರಾರು ಮಕ್ಕಳು ದಿನಾಲೂ ಇಲ್ಲಿ ಅಡ್ಡಾಡುತ್ತಾರೆ. ಸಣ್ಣ ಮಕ್ಕಳು ಸೇತುವೆ ಬದಿಯಿಂದ ಕುತೂಹಲದಿಂದ ಕೆಳಗೆ ಇಣುಕುವ ಸಾಧ್ಯತೆಗಳಿವೆ. ಆದರೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಏನೂ ನಡೆಯದಂತೆ ಮೌನವ್ರತಕ್ಕೆ ಶರಣಾಗಿದ್ದಾರೆ. ಗ್ರಾಮಸ್ಥರು ಹಲವು ಬಾರಿ ಗುತ್ತಿಗೆದಾರರಿಗೆ ಕೂಡ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ಯಾವುದೇ ಸ್ಪಂದನೆ ಕಂಡು ಬಂದಿಲ್ಲ.ಈ ಹಿನ್ನೆಲೆಯಲ್ಲಿ 

ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ್ ಮಧ್ಯಪ್ರೇಶಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು