4:25 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಸ್ಕಿ ಕ್ಷೇತ್ರದ ಬೆಳ್ಳಿಗನೂರು ಗ್ರಾಮದಲ್ಲಿ ತಡೆಗೋಡೆ  ಇಲ್ಲದ ನೂತನ ಸೇತುವೆ: ಅಪಾಯಕ್ಕೆ ಭಾರಿ ಆಹ್ವಾನ

10/10/2021, 11:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಬೆಳ್ಳಿಗನೂರು ಗ್ರಾಮದಲ್ಲಿ ಉಟಕನೂರು ಹೋಗುವ ರಸ್ತೆಗೆ ನೂತವಾಗಿ ನಿರ್ಮಿಸಿದ ಸೇತುವೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಪಕ್ಕದಲ್ಲೇ ಶಾಲೆ ಇರುವ ಈ ಸೇತುವೆಗೆ ತಡೆಗೋಡೆ ಅಥವಾ ಗಾರ್ಡ್ ನಿರ್ಮಿಸದೇ ಇರುವುದೇ ಡೇಂಜರ್ ಸನ್ನಿವೇಶವನ್ನು ಸೃಷ್ಟಿಸಿದೆ.


ನೂತನ ಸೇತುವೆಯ ಕಾಮಗಾರಿ ಮುಗಿದು ಬಿಲ್ ಪಾವತಿಯೂ ನಡೆದಿದ್ದರೂ ಸೇತುವೆಗೆ ತಡೆಗೋಡೆ ಮಾತ್ರ ನಿರ್ಮಿಸಿಲ್ಲ. ಇಲ್ಲೇ ಪಕ್ಕದಲ್ಲಿ ಸರಕಾರಿ ಶಾಲೆ ಇದ್ದು, ನೂರಾರು ಮಕ್ಕಳು ದಿನಾಲೂ ಇಲ್ಲಿ ಅಡ್ಡಾಡುತ್ತಾರೆ. ಸಣ್ಣ ಮಕ್ಕಳು ಸೇತುವೆ ಬದಿಯಿಂದ ಕುತೂಹಲದಿಂದ ಕೆಳಗೆ ಇಣುಕುವ ಸಾಧ್ಯತೆಗಳಿವೆ. ಆದರೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಏನೂ ನಡೆಯದಂತೆ ಮೌನವ್ರತಕ್ಕೆ ಶರಣಾಗಿದ್ದಾರೆ. ಗ್ರಾಮಸ್ಥರು ಹಲವು ಬಾರಿ ಗುತ್ತಿಗೆದಾರರಿಗೆ ಕೂಡ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ಯಾವುದೇ ಸ್ಪಂದನೆ ಕಂಡು ಬಂದಿಲ್ಲ.ಈ ಹಿನ್ನೆಲೆಯಲ್ಲಿ 

ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ್ ಮಧ್ಯಪ್ರೇಶಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು