1:26 AM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಸ್ಕಿ ಕ್ಷೇತ್ರದ ಬೆಳ್ಳಿಗನೂರು ಗ್ರಾಮದಲ್ಲಿ ತಡೆಗೋಡೆ  ಇಲ್ಲದ ನೂತನ ಸೇತುವೆ: ಅಪಾಯಕ್ಕೆ ಭಾರಿ ಆಹ್ವಾನ

10/10/2021, 11:26

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಕ್ಷೇತ್ರದ ಬೆಳ್ಳಿಗನೂರು ಗ್ರಾಮದಲ್ಲಿ ಉಟಕನೂರು ಹೋಗುವ ರಸ್ತೆಗೆ ನೂತವಾಗಿ ನಿರ್ಮಿಸಿದ ಸೇತುವೆ ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಪಕ್ಕದಲ್ಲೇ ಶಾಲೆ ಇರುವ ಈ ಸೇತುವೆಗೆ ತಡೆಗೋಡೆ ಅಥವಾ ಗಾರ್ಡ್ ನಿರ್ಮಿಸದೇ ಇರುವುದೇ ಡೇಂಜರ್ ಸನ್ನಿವೇಶವನ್ನು ಸೃಷ್ಟಿಸಿದೆ.


ನೂತನ ಸೇತುವೆಯ ಕಾಮಗಾರಿ ಮುಗಿದು ಬಿಲ್ ಪಾವತಿಯೂ ನಡೆದಿದ್ದರೂ ಸೇತುವೆಗೆ ತಡೆಗೋಡೆ ಮಾತ್ರ ನಿರ್ಮಿಸಿಲ್ಲ. ಇಲ್ಲೇ ಪಕ್ಕದಲ್ಲಿ ಸರಕಾರಿ ಶಾಲೆ ಇದ್ದು, ನೂರಾರು ಮಕ್ಕಳು ದಿನಾಲೂ ಇಲ್ಲಿ ಅಡ್ಡಾಡುತ್ತಾರೆ. ಸಣ್ಣ ಮಕ್ಕಳು ಸೇತುವೆ ಬದಿಯಿಂದ ಕುತೂಹಲದಿಂದ ಕೆಳಗೆ ಇಣುಕುವ ಸಾಧ್ಯತೆಗಳಿವೆ. ಆದರೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ಮಾತ್ರ ಏನೂ ನಡೆಯದಂತೆ ಮೌನವ್ರತಕ್ಕೆ ಶರಣಾಗಿದ್ದಾರೆ. ಗ್ರಾಮಸ್ಥರು ಹಲವು ಬಾರಿ ಗುತ್ತಿಗೆದಾರರಿಗೆ ಕೂಡ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ಯಾವುದೇ ಸ್ಪಂದನೆ ಕಂಡು ಬಂದಿಲ್ಲ.ಈ ಹಿನ್ನೆಲೆಯಲ್ಲಿ 

ಮಸ್ಕಿ ಶಾಸಕ ಬಸನಗೌಡ ತುರ್ವಿಹಾಳ್ ಮಧ್ಯಪ್ರೇಶಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು