3:10 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಮಸ್ಕಿ ಕ್ಷೇತ್ರದ ರಾಜಕೀಯ ದಿಕ್ಸೂಚಿಯನ್ನೇ ಮತದಾರರು ಬದಲಾಯಿಸಿದ್ದಾರೆ: ಬಾದರ್ಲಿ ಶ್ಲಾಘನೆ

25/07/2021, 18:36

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸರ್ವರ ಶ್ರಮದಿಂದ ಮಸ್ಕಿ ಕ್ಷೇತ್ರದ ಫಲಿತಾಂಶ ರಾಜಕೀಯ ದಿಕ್ಸೂಚಿಯನ್ನೇ ಬದಲಾಯಿಸಿದೆ.

ಮುಂಬರುವ ದಿನಗಳಲ್ಲಿ ಸಿಂಧನೂರು ಮತ್ತು ಮಸ್ಕಿ ಕ್ಷೇತ್ರ ಮತದಾರರು ಮತ್ತೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ. ಅವರು ಈ ಬಾರಿ ಬಸವನಗೌಡ ತುರುವಿಹಾಳ ಅವರನ್ನು ಕೈಹಿಡಿದಿದ್ದಾರೆ ಎಂದು ಸಿಂಧನೂರು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ವಿರುಪಾಪುರ ಗ್ರಾಮದಲ್ಲಿ ನೂತನ ಶಾಸಕರಿಗೆ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ತುರುವಿಹಾಳ ಅವರನ್ನು ಸನ್ಮಾನಿಸಿ ಮಾತನಾಡಿದರು.

ಕೊರೊನಾ ಸಮಯದಲ್ಲಿ ಕಾರ್ಯಕರ್ತರು ಪ್ರತಿಯೊಂದು ಹಳ್ಳಿಗೆ ಹೋಗಿ ಮತದಾರರನ್ನು ಯೋಗಕ್ಷೇಮ ವಿಚಾರಿಸಿದ್ದಾರೆ. ಅಲ್ಲಿನ ಸ್ಥಿತಿಗತಿಗಳು ತಿಳಿದುಕೊಂಡು ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮಸ್ಕಿ ಕ್ಷೇತ್ರದ ದಿಕ್ಸೂಚಿ ಬದಲಾಯಿಸಿದ್ದಾರೆ. ಕೈಹಿಡಿದ ಮತದಾರರನ್ನು ನಾವು ಸ್ಮರಿಸಬೇಕು ಎಂದು ಬಾದರ್ಲಿ ಹೇಳಿದರು.

ಶಾಸಕ ಬಸನಗೌಡ ತುರುವಿಹಾಳ ಮಾತನಾಡಿ,ನಿಮ್ಮ ಋಣವನ್ನು ನಾನು ತೀರಿಸುತ್ತೇನೆ. ನಿಮ್ಮ ಸಮಸ್ಯೆಗಳು ಸ್ಪಂದಿಸುತ್ತೇನೆ. ನನ್ನ ಮತದಾರರ ಅಭಿಮಾನಿಗಳೇ ನನ್ನ ದೇವರು ಎಂದರು.

ಸಿಂಧನೂರು ಕಾಂಗ್ರೆಸ್ ಮುಖಂಡ ವೆಂಕಟೇಶ್ವರ ಮಾತನಾಡಿ, ಹಲವರ ಪರಿಶ್ರಮದಿಂದ, ಜನರ ಬೆಂಬಲದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮತದಾರರನ್ನು ನಾವು ಸ್ಮರಿಸಲೇಬೇಕು. ಮುಂದಿನ ಬಾರಿ ಸಿಂಧನೂರು ಮತ್ತು ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ನಮ್ಮ ಗುರಿ. ಮತದಾರರನ್ನು ನಾವು ಯಾವತ್ತು ಕೈಬಿಡಬಾರದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು