2:29 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮಸ್ಕಿ ಕ್ಷೇತ್ರದ ರಾಜಕೀಯ ದಿಕ್ಸೂಚಿಯನ್ನೇ ಮತದಾರರು ಬದಲಾಯಿಸಿದ್ದಾರೆ: ಬಾದರ್ಲಿ ಶ್ಲಾಘನೆ

25/07/2021, 18:36

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಸರ್ವರ ಶ್ರಮದಿಂದ ಮಸ್ಕಿ ಕ್ಷೇತ್ರದ ಫಲಿತಾಂಶ ರಾಜಕೀಯ ದಿಕ್ಸೂಚಿಯನ್ನೇ ಬದಲಾಯಿಸಿದೆ.

ಮುಂಬರುವ ದಿನಗಳಲ್ಲಿ ಸಿಂಧನೂರು ಮತ್ತು ಮಸ್ಕಿ ಕ್ಷೇತ್ರ ಮತದಾರರು ಮತ್ತೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುತ್ತಾರೆ. ಅವರು ಈ ಬಾರಿ ಬಸವನಗೌಡ ತುರುವಿಹಾಳ ಅವರನ್ನು ಕೈಹಿಡಿದಿದ್ದಾರೆ ಎಂದು ಸಿಂಧನೂರು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಹೇಳಿದರು.

ವಿರುಪಾಪುರ ಗ್ರಾಮದಲ್ಲಿ ನೂತನ ಶಾಸಕರಿಗೆ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ತುರುವಿಹಾಳ ಅವರನ್ನು ಸನ್ಮಾನಿಸಿ ಮಾತನಾಡಿದರು.

ಕೊರೊನಾ ಸಮಯದಲ್ಲಿ ಕಾರ್ಯಕರ್ತರು ಪ್ರತಿಯೊಂದು ಹಳ್ಳಿಗೆ ಹೋಗಿ ಮತದಾರರನ್ನು ಯೋಗಕ್ಷೇಮ ವಿಚಾರಿಸಿದ್ದಾರೆ. ಅಲ್ಲಿನ ಸ್ಥಿತಿಗತಿಗಳು ತಿಳಿದುಕೊಂಡು ಅವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮಸ್ಕಿ ಕ್ಷೇತ್ರದ ದಿಕ್ಸೂಚಿ ಬದಲಾಯಿಸಿದ್ದಾರೆ. ಕೈಹಿಡಿದ ಮತದಾರರನ್ನು ನಾವು ಸ್ಮರಿಸಬೇಕು ಎಂದು ಬಾದರ್ಲಿ ಹೇಳಿದರು.

ಶಾಸಕ ಬಸನಗೌಡ ತುರುವಿಹಾಳ ಮಾತನಾಡಿ,ನಿಮ್ಮ ಋಣವನ್ನು ನಾನು ತೀರಿಸುತ್ತೇನೆ. ನಿಮ್ಮ ಸಮಸ್ಯೆಗಳು ಸ್ಪಂದಿಸುತ್ತೇನೆ. ನನ್ನ ಮತದಾರರ ಅಭಿಮಾನಿಗಳೇ ನನ್ನ ದೇವರು ಎಂದರು.

ಸಿಂಧನೂರು ಕಾಂಗ್ರೆಸ್ ಮುಖಂಡ ವೆಂಕಟೇಶ್ವರ ಮಾತನಾಡಿ, ಹಲವರ ಪರಿಶ್ರಮದಿಂದ, ಜನರ ಬೆಂಬಲದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ. ಮತದಾರರನ್ನು ನಾವು ಸ್ಮರಿಸಲೇಬೇಕು. ಮುಂದಿನ ಬಾರಿ ಸಿಂಧನೂರು ಮತ್ತು ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವುದೇ ನಮ್ಮ ಗುರಿ. ಮತದಾರರನ್ನು ನಾವು ಯಾವತ್ತು ಕೈಬಿಡಬಾರದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು