6:27 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಮಸ್ಕಿ ವೀರಶೈವ ಜಂಗಮ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತ್ಯೋತ್ಸವ: ಅಯ್ಯಾಚಾರ ದೀಕ್ಷೆ 

16/03/2022, 16:36

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಶ್ರೀ ಗಚ್ಚಿನ ಹಿರೇಮಠದಲ್ಲಿ ಜರಗಿರುವ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತ್ಯೋತ್ಸವ ಅದ್ದೂರಿಯಲ್ಲಿ ನಡೆಯಿತು.


ಶ್ರೀ ಬ್ರಹ್ಮ ವರ ರುದ್ರಮುನಿ ಶಿವಾಚಾರ್ಯರು ಅಮೃತ ಅವರ ನೇತೃತ್ವದಲ್ಲಿ ಬೆಳಗ್ಗೆ ಆದಿ ಜಗದ್ಗುರುಗಳು ರೇಣುಕಾಚಾರ್ಯರ ಮೂರ್ತಿಗೆ ರುದ್ರಾಭಿಷೇಕ ಮಾಡಲಾಯಿತು. ನಂತರ ಜಂಗಮ ವಟುಗಳಿಗೆ ಅಯ್ಯಾಚಾರ ದೀಕ್ಷೆ ನೀಡಲಾಯಿತು . ಶ್ರೀ ಪಂಚಾಚಾರ್ಯ ಧ್ವಜಾರೋಹಣ ನೆರವೇರಿಸಲಾಯಿತು. ನಂತರ ತನ್ಮೂಲಕ ಶ್ರೀ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರ ಮೆರವಣಿಗೆ ಚಾಲನೆ ನೀಡಲಾಯಿತು. ಜಗದ್ಗುರುಗಳ ಭಾವಚಿತ್ರವನ್ನು ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಜಯ ಗೋಷಳೊಂದಿಗೆ ಚಾಲನೆ ನೀಡಲಾಯಿತು. ಹಳೆ ಬಸ್ಟ್ಯಾಂಡ್ ಅಶೋಕ್ ವೃತ್ತ ದೈವದ ಕಟ್ಟಿ ತೇರ್ ಬಜಾರ್ ಕನಕ ವೃತ್ತ ಬ್ರಮರಾಂಬ ಕಲ್ಯಾಣಮಂಟಪ. ಕಳಸ ಕನ್ನಡಿ ಒಂದಿಗೆ ಭಾವಚಿತ್ರ ಮೆರವಣಿಗೆ ಶ್ರೀ ಗಚ್ಚಿನ ಮಠ ತಲುಪಿತು. ಜಯಂತೋತ್ಸವ ಅಂಗವಾಗಿ ಮಹಿಳೆಯರ ಮಕ್ಕಳ ವಿವಿಧ ರೀತಿಯ ಛದ್ಮವೇಷ ಶ್ರೀ ರೇಣುಕಾಚಾರ್ಯರ ಹಾಗೂ ಪಂಚಪೀಠ ಹಾದಿಗಳ ವೇಷ ನೋಡುಗರನ್ನು ಆಕರ್ಷಣೆ ಕಂಡು ಬಂತು. ಶಿವದೀಕ್ಷೆ ಕಾರ್ಯಕ್ರಮ ಮಾಡಲಾಯಿತು. ಗಚ್ಚಿನ ಹಿರೇಮಠ ಸಾಯಂಕಾಲ ಜನಜಾಗೃತಿ ಧರ್ಮಸಭೆ. ದಿವ್ಯ ಸಾನಿಧ್ಯವನ್ನು ಷಟಸ್ಥಲ ಬ್ರಹ್ಮ ಡಾ.ನಾಗಭೂಷಣ ಶಿವಾಚಾರ್ಯರು ಮಹಾಸ್ವಾಮಿಗಳು, ಬೋಳೋಡಿ ಬಸವೇಶ್ವರ ಸಂಸ್ಥಾನ ಮಠ ಹೆಬ್ಬಾಳ, ಶ್ರೀ ಷಟಸ್ಥಲ ಬ್ರಹ್ಮ ವರ ರುದ್ರಮುನಿ ಶಿವಾಚಾರ್ಯರು ಮಹಾಸ್ವಾಮಿಗಳು,  ಗಚ್ಚಿನ ಹಿರೇಮಠ ಮಸ್ಕಿ .ಶ್ರೀ ಷಟಸ್ಥಲ ಬ್ರಹ್ಮ ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳು, ಮಹಾಂತ ಮಠ ಸಂತೆಕೆಲ್ಲೂರು, ಧರ್ಮೋಪದೇಶ ಕಾಲಜ್ಞಾನಿ ಬ್ರಹ್ಮ ಸದ್ಗುರು ಶರಣಬಸವ ಮಹಾಸ್ವಾಮಿಗಳು, ತಳ್ಳಿ ಹಾಳ ಸಂಸ್ಥಾನ ಕೋಡಿಮಠ ಕಾಲಜ್ಞಾನ ಮಠ ಗಜೇಂದ್ರಗಡ ಮುಖ್ಯ ಅತಿಥಿಗಳಾಗಿ ಶಾಸಕ ಆರ್. ಬಸನಗೌಡ ತುರುವಿಹಾಳ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಅಮರನಾಥ ರೆಡ್ಡಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ, ಜಂಗಮ ಸಮಾಜದ ಅಧ್ಯಕ್ಷ ಸಿದ್ದಲಿಂಗಯ್ಯ ಸ್ವಾಮಿ ಸೊಪ್ಪಿಮಠ, ಆದಯ್ಯ ಸ್ವಾಮಿ ಕರಿ ಬಸಯ್ಯಸ್ವಾಮಿ ಸಿಂಧನೂರು ಮಠ, ತಿಪ್ಪಯ್ಯ ಸ್ವಾಮಿ ಸಾಲಿಮಠ, ಯುವ ಘಟಕದ ಅಧ್ಯಕ್ಷ ಶಂಭುಲಿಂಗಯ್ಯ ಸ್ವಾಮಿ, ಕಂಬಾಳಿಮಠ ವೀರೇಶ್ ಪಾಟೀಲ್,  ಡಾ. ಪಂಚಾಕ್ಷರಯ್ಯ ಹಿರೇಮಠ, ಶಿವಕುಮಾರಸ್ವಾಮಿ ಕಡ ಮುಡಿ ಮಠ, ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ (ಸಂಪಾದಕರು),
ಗಣ ಮಠದಯ್ಯ ಸ್ವಾಮಿ ಸಾಲಿಮಠ, ನಾಗಯ್ಯ ಸ್ವಾಮಿ, ಉದ್ಬಾಳ ಶಿವಶಂಕರಯ್ಯ ಸ್ವಾಮಿ,ಶರಣಯ್ಯ ಸ್ವಾಮಿ, ದಿನ್ನಿ ಮಠ ಮಲ್ಲಿಕಾರ್ಜುನ್, ಬ್ಯಾಳಿ ಪುರಸಭೆ ಸದಸ್ಯ ಅಂದಾನಪ್ಪ ಗುಂಡಳ್ಳಿ, ಡಾಕ್ಟರ್ ಶಿವಶರಣಪ್ಪ ಪ್ರಕಾಶ್ ಮಸ್ಕಿ, ಗವಿಸಿದ್ದಪ್ಪ ಸಾಹುಕಾರ್ ಸಂತೆಕೆಲ್ಲೂರು ಮಲ್ಲಯ್ಯ, ಮಹೇಶ್ ಕೊಟ್ಟೂರು ಮಠ, ಶಿವ ಶರಣಯ್ಯಸ್ವಾಮಿ, ಸ್ವಾಮಿ ಶರಣಬಸವ ಸೊಪ್ಪಿಮಠ ಪುರಸಭೆ ಸದಸ್ಯರು ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಪಾಟೀಲ್ ಶಾರದಾ ಸರಗಣಾಚಾರಿ, ಭುವನೇಶ್ವರಿ, ರಾಜೇಶ್ವರಿ ಹಿರೇಮಠ, ವಿದ್ಯಾಶ್ರೀ,ಶಿವಲೀಲಾ ಗಚ್ಚಿನಮಠ, ಅನ್ನಪೂರ್ಣ ಸರಗಣಾಚಾರಿ ಇನ್ನು ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು