3:56 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಮಸ್ಕಿ; ವೀರರಾಣಿ ಕಿತ್ತೂರು ಚನ್ನಮ್ಮ ಪಿಯು ಕಾಲೇಜಿನ ಕಟ್ಟಡ ಉದ್ಘಾಟನೆ

27/10/2021, 17:52

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಉತ್ಕೃಷ್ಟ ಶಿಕ್ಷಣ ಪಡೆದು ದೇಶಕ್ಕೆ ಆಸ್ತಿಯಾಗಬೇಕು ಎಂದು ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿದ ಸಂಸ್ಥೆಯ ಗೌರವಾಧ್ಯಕ್ಷ

ಡಾ.ಶಿವಶರಣಪ್ಪ ಇತ್ಲಿ ಕರೆ ನೀಡಿದರು.

ಸ್ಥಳೀಯ ವೀರರಾಣಿ ಕಿತ್ತೂರು ಚನ್ನಮ್ಮ ಪಿಯು ಕಾಲೇಜಿನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ಕ್ಷೇತ್ರದಲ್ಲಿ ಪರಿಶ್ರಮ ಇರುವಲ್ಲಿ ಸರಸ್ವತಿ ನೆಲೆಸುತ್ತಾಳೆ. ಶಿಕ್ಷಣ ನೀಡುವ ಹಾಗೂ ಪಡೆಯುವ ಉತ್ಸಾಹದ ಜತೆ ಅನುಭವವಿರಬೇಕು. ಜ್ಞಾನಕ್ಕೆ ಪೇಟೆಂಟ್ ಎನ್ನುವುದಿಲ್ಲ. ಶಿಕ್ಷಣ ನೀಡಲು ಸಜ್ಜಾಗಿ ನಿಂತಿರುವ ಕಟ್ಟದ ಹೂರಣ ಅದ್ಭುತವಾಗಿದೆ. ಇಲ್ಲಿನ ಪರಿಸರ ಎಲ್ಲ ಹಂತದಲ್ಲಿ ಪರಿಶುದ್ಧವಾಗಿದೆ. ಹೀಗಾಗಿ ಶಿಕ್ಷಣ ಸಂಸ್ಥೆಗೆ ಸರಸ್ವತಿ ಒಲಿಯಲಿದ್ದಾಳೆ ಎಂದು ಅವರು ಹೇಳಿದರು.

ವರ್ತಕರಾದ ಪಂಪಣ್ಣ ಗುಂಡಳ್ಳಿ ಮಾತನಾಡಿ, ಕಾಲೇಜಿನ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಮತ್ತು ಜೀವನಕ್ಕೆ ಬೇಕಾದ ನೀತಿಯನ್ನು ಉಪನ್ಯಾಸಕರು ಬೋಧಿಸಬೇಕು. ಈ ವಿದ್ಯಾ ಸಂಸ್ಥೆಯಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಕಾಲೇಜಿಗೆ ಕೀರ್ತಿ ತರುವಂತಹವರು ನಿವಾಗಬೇಕು ಎಂದು ನುಡಿದರು.                           ನೂತನ ಕಾಲೇಜು ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮುಖಂಡರಾದ ಮಹಾದೇವಪ್ಪ ಗೌಡ ಪೋಲಿಸ್ ಪಾಟೀಲ್, ಯಲ್ಲೋಜಿರಾವ್ ಕೊರೆಕರ್, ಮಲ್ಲಪ್ಪ ಕುಡತಿನಿ,ಸಂಸ್ಥೆಯ ಅಧ್ಯಕ್ಷರಾಗದ ಸುಭಾಷ್ ಕೊರೆಕರ್,ಖಜಾಂಚಿ ಪಿ ರಾಮು, ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಕರ್ಲಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇನ್ನಿತರ ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು